Breaking News

ಅಪ್ಪು ಪ್ರೇರಣೆಯಿಂದ ಅಂಗಾಂಗ ದಾನ ಹೆಚ್ಚಳ

Spread the love

ಬೆಂಗಳೂರು: ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ (ಅಪ್ಪು) ಅವರು ನಮ್ಮನ್ನೆಲ್ಲ ಅಗಲಿ ಒಂದು ವರ್ಷವೇ ಕಳೆಯಿತು. ಆದರೆ, ಅವರ ನೆನಪುಗಳು ಮಾತ್ರ ಇನ್ನೂ ಸದಾ ಹಸಿಯಾಗಿವೆ.

ಪುನೀತ್‌ ನಟನೆಗೆ ಮಾತ್ರ ಸೀಮಿತವಾಗದೇ, ಪರೋಕ್ಷವಾಗಿ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ತೊಡಗಿದ್ದರು.

ಸಾವಿನ ನಂತರ ಕಣ್ಣುಗಳನ್ನು ದಾನ ಮಾಡಿ, ನಾಲ್ಕು ಜನರಿಗೆ ಬೆಳಕಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅವರ ಸ್ಫೂರ್ತಿ, ಪ್ರೇರಣೆಯಿಂದ ಪುನೀತ್‌ ಅವರ ಅಭಿಮಾನಿಗಳು ಸೇರಿದಂತೆ ನಾಡಿನಾದ್ಯಂತ ಸಹಸ್ರಾರು ಮಂದಿ ನೇತ್ರದಾನ ಮಾತ್ರವಲ್ಲದೇ, ಅಂಗಾಗ ದಾನ ಹಾಗೂ ಅನ್ನದಾನ ಮಾಡಲು ಮುಂದಾಗಿದ್ದಾರೆ.

ಪುನೀತ್‌ ಅವರನ್ನು ಒಬ್ಬ ದೇವರಂತೆ ಕಾಣುವ ನಾಡಿನ ಅಭಿಮಾನಿಗಳು ಅವರ ದಾರಿಯಲ್ಲಿ ನಡೆಯುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಪ್ರತಿ ತಿಂಗಳು 10ರಿಂದ 15 ಜನರು ನೇತ್ರದಾನ ಮಾಡುತ್ತಿದ್ದು, ಒಂದು ವರ್ಷದಲ್ಲಿ 150ಕ್ಕೂ ಹೆಚ್ಚು ಜನ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ ಎಂದು ಮಿಂಟೋ ಕಣ್ಣಿನ ಆಸ್ಪತ್ರೆಯ ಸುಜಾತ ರಾಥೋಡ್‌ ತಿಳಿಸುತ್ತಾರೆ. ಕೋವಿಡ್‌ ನಂತರ ಕಣ್ಣುಗಳನ್ನು ದಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪುನೀತ್‌ ಸಾವಿನ ನಂತರ ಮತ್ತಷ್ಟು ಜಾಸ್ತಿಯಾಗಿದೆ. ಅದರಲ್ಲೂ 30-35 ವರ್ಷದ ಯುವಕರು ಅಧಿಕ ಸಂಖ್ಯೆಯಲ್ಲಿದ್ದಾರೆ. ಒಂದು ವರ್ಷದಲ್ಲಿ 2500ಕ್ಕೂ ಹೆಚ್ಚು ಜನ ನೇತ್ರದಾನ ಮಾಡಲು ಪ್ಲೆಡ್ಜ್(ಪ್ರತಿಜ್ಞೆ) ಮಾಡಿದ್ದಾರೆ ಎಂದು ತಿಳಿಸಿದರು.

ಕಣ್ಣುಗಳನ್ನು ಮಾತ್ರವಲ್ಲದೇ, ದೇಹದ ಅಂಗಾಂಗ ದಾನ ಮಾಡುವವರ ಸಂಖ್ಯೆಯೂ ಅಧಿಕವಾಗಿದೆ. ಕಿಡ್ನಿ, ಲಿವರ್‌, ಹೃದಯ, ಶ್ವಾಸಕೋಶ, ಮೆದುಳು, ಸಣ್ಣ ಕರಳನ್ನು ದಾನ ಮಾಡಿದ್ದಾರೆ. ಇದುವರೆಗೂ ಒಟ್ಟು 33,866 ದಾನಿಗಳು ವಿವಿಧ ಅಂಗಾಂಗಳ ದಾನ ಮಾಡುವುದಾಗಿ ಪ್ರತಿಜ್ಞೆ(ಪ್ಲೆಡ್ಜ್) ಮಾಡಿದ್ದು, ಇದರಲ್ಲಿ 2020ರಲ್ಲಿ 35 ಜನ ದಾನಿಗಳು 167 ಅಂಗಾಂಗಗಳನ್ನು ದಾನ ಮಾಡಿದ್ದರೆ, 2021ರಲ್ಲಿ 70 ಜನ ದಾನಿಗಳು 284 ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಅಷ್ಟೇ ಅಲ್ಲದೇ, 2022ರಲ್ಲಿ ಅಕ್ಟೋಬರ್‌ ತಿಂಗಳವರೆಗೆ 112 ದಾನಿಗಳು 563 ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಅದರಲ್ಲಿ 174 ಕಾರ್ನಿಯಾ, 163 ಕಿಡ್ನಿ, 97 ಲಿವರ್‌, 32 ಹೃದಯದ ಭಾಗವನ್ನು ದಾನ ಮಾಡಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ “ಜೀವಸಾರ್ಥಕತೆ’ಯಲ್ಲಿ ದಾಖಲಾಗಿದೆ.


Spread the love

About Laxminews 24x7

Check Also

ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್

Spread the loveಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ