Breaking News

ಅಂಬೇಡ್ಕರ್ ಅಭಿವೃದ್ಧಿ ನಿಗಮ: ‘ಕುರ್ಚಿ’ಗಾಗಿ ಗುದ್ದಾಟ

Spread the love

ಬೆಂಗಳೂರು : ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಡಾ.ಬಿ.

ಹೀಗಾಗಿ, ಆ ಹುದ್ದೆಗೆ ವರ್ಗಾವಣೆಗೊಂಡಿರುವ ಕೆ.ಎನ್‌. ಸುರೇಶ್‌ ನಾಯ್ಕ್‌ ಪರದಾಡುತ್ತಿದ್ದು, ಇಬ್ಬರ ಮಧ್ಯೆ ‘ಕುರ್ಚಿಗಾಗಿ ಗುದ್ದಾಟ’ ನಡೆದಿದೆ.

ಸುರೇಶ್‌ ಕುಮಾರ್‌ ವಿರುದ್ಧ ಭ್ರಷ್ಟಚಾರದ ಆರೋಪ ಹೊರಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ನೀಡಿತ್ತು. ಕೂಡಲೇ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರೆ, ತಕ್ಷಣವೇ ತನಿಖೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಮುಖ್ಯ ಕಾರ್ಯದರ್ಶಿಯವರೂ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯ ಸೂಚನೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್‌ಗೆ ಅ. 27 ರಂದು ನೋಟಿಸ್‌ ನೀಡಿರುವ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೇಜರ್‌ ಮಣಿವಣ್ಣನ್‌, ಅಮಾನತುಪಡಿಸಿ ತನಿಖೆಗೆ ಆದೇಶಿಸುವ ಬಗ್ಗೆ ತಿಳಿಸಿದ್ದಾರೆ. ಅಲ್ಲದೆ, ಆರೋಪಗಳಿಗೆ ಸಂಬಂಧಿಸಿದಂತೆ 15 ದಿನಗಳ ಒಳಗೆ ವಿವರಣೆ ನೀಡಬೇಕು ಎಂದೂ ನೋಟಿಸ್‌ನಲ್ಲಿ ಹೇಳಿದ್ದಾರೆ. ಆ ಬೆನ್ನಲ್ಲೆ, ಸುರೇಶ್‌ ಕುಮಾರ್‌ ಅವರನ್ನು (ಅ. 29) ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ.

ಸುರೇಶ್‌ ನಾಯ್ಕ್ ಅವರು ಅ. 30 ಭಾನುವಾರ ಆಗಿದ್ದರಿಂದ 31 ರಂದು ಅಧಿಕಾರ ವಹಿಸಿಕೊಳ್ಳಲು ನಿಗಮಕ್ಕೆ ತೆರಳಿದ್ದರು. ಆದರೆ, ಪ್ರವಾಸದ ಹೆಸರಿನಲ್ಲಿ ಸುರೇಶ್‌ಕುಮಾರ್‌ ಅಂದು ಕಚೇರಿಗೆ ಬಂದಿರಲಿಲ್ಲ. ಹೀಗಾಗಿ, ಅವರ ಅನುಪಸ್ಥಿತಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದ ನಾಯ್ಕ್‌, ಇಲಾಖೆಯ ಕಾರ್ಯದರ್ಶಿ ಮತ್ತು ಸಚಿವರಿಗೆ ಮಾಹಿತಿ ನೀಡಿದ್ದರು.

ನ. 1 ರಂದು ರಾಜ್ಯೋತ್ಸವದ ಪ್ರಯುಕ್ತ ಸರ್ಕಾರಿ ರಜೆಯಾಗಿದ್ದು, 2 ರಂದು ಮತ್ತೆ ನಾಯ್ಕ್‌ ಅವರು ಕಚೇರಿಗೆ ಬರುವಷ್ಟರಲ್ಲಿ ಸುರೇಶ್‌ಕುಮಾರ್‌ ಅವರೇ ಎಂಡಿ ಕುರ್ಚಿಯಲ್ಲಿ ಕುಳಿತಿದ್ದರು. ಸರ್ಕಾರದ ಆದೇಶದಂತೆ ತಾನು ಅಧಿಕಾರ ವಹಿಸಿಕೊಂಡಿರುವ ಬಗ್ಗೆ ನಾಯ್ಕ್‌ ತಿಳಿಸಿದರೂ ಕೇಳಿಸಿಕೊಳ್ಳದ ಸುರೇಶ್‌ ಕುಮಾರ್‌, ಕುರ್ಚಿ ಬಿಟ್ಟುಕೊಟ್ಟಿಲ್ಲ. ಅಲ್ಲದೆ, ತಮ್ಮ ಬೆಂಬಲಿಗರನ್ನು ಕೊಠಡಿಯಲ್ಲಿ ಕುಳ್ಳಿರಿಸಿಕೊಂಡಿದ್ದರು ಎಂದೂ ಆರೋಪಿಸಲಾಗಿದೆ. ಹೀಗಾಗಿ ಅಂಬೇಡ್ಕರ್ ನಿಗಮದ ಬದಲು, ಪಕ್ಕದಲ್ಲಿಯೇ ಇರುವ ಅಂಬಿಗರ ಚೌಡಯ್ಯ ನಿಗಮದಲ್ಲಿ ನಾಯ್ಕ್‌ ಕುಳಿತಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಸಮನ್ಸ್​ಗೆ ಹೈಕೋರ್ಟ್ ತಡೆ (

Spread the loveಬೆಂಗಳೂರು: ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಘನೆ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ