Breaking News

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಇಂದು ಬಹುನಿರೀಕ್ಷಿತ 7 ನೇ ವೇತನ ಆಯೋಗ ರಚನೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಇಂದು ಭರ್ಜರಿ ಸಿಹಿಸುದ್ದಿ ನೀಡುವ ಸಾಧ್ಯತೆ ಇದ್ದು, ಏಳನೇ ವೇತನ ಆಯೋಗ ರಚಿಸಬೇಕೆಂಬ ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆಯಂತೆ ರಾಜ್ಯ ಸರ್ಕಾರ ಇಂದು ಆಯೋಗ ರಚಿಸಿ ಆದೇಶ ಹೊರಡಿಸುವ ಸಾಧ್ಯತೆ ಇದೆ.

 

ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ರಚಿಸುವುದಾಗಿ ಪ್ರಕಟಿಸಿದ್ದರು. ಈಗ ಆಯೋಗ ರಚಿಸುವ ಸಂಬಂಧ ಭಾನುವಾರ ಸಭೆ ನಡೆಸಿ ಅಂತಿಮಗೊಳಿಸಿದ್ದು, ಇಂದು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

7 ನೇ ವೇತನ ಆಯೋಗ ಘೋಷಣೆಯಿಂದ 13.5 ಲಕ್ಷ ನೌಕರರಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರಿಗಳ 3 ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ 7 ನೇ ವೇತನ ಆಯೋಗ ಅನ್ವಯವಾಗಲಿದ್ದು, ಸರ್ಕಾರವು ಹೆಚ್ಚುವರಿಯಾಗಿ 12,500 ಕೋಟಿ ರೂ. ವೆಚ್ಚ ಮಾಡಲಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ