ಚಿತ್ರದುರ್ಗ: ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿ ಪರಶುರಾಮ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಮುರುಘಾ ಶ್ರೀ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.ಪ್ರಕರಣದ ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.
ಅಕ್ಟೋಬರ್ 27ರಂದೇ ತನಿಖಾಧಿಕಾರಿ ಅನಿಲ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ಸಿಸಿ ನಂಬರ್ ಬರುವುದು ಬಾಕಿಯಿದೆ. ಇದರ ನಡುವೆ ಪ್ರಕರಣದ ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್ಪಿ ಹೇಳಿದ್ದಾರೆ. ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ ಇವರಿಬ್ಬರ ವಿರುದ್ಧ ಆರೋಪಗಳಿಗೆ ಈವರೆಗೆ ಸಾಕ್ಷ್ಯಾಧಾರ ಲಭ್ಯವಾಗಿಲ್ಲ , ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಚ್ಚಿ ಬೀಳಿಸುವ ಮಾಹಿತಿ-ಮುರುಘಾ ಶ್ರೀ ವಿರುದ್ಧ ಡ್ರಗ್ಸ್ ಸೇವನೆ ಆರೋಪ
ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುರುಘಾ ಶರಣರ ವಿರುದ್ಧ ಕೊಲೆ ಆರೋಪ, ಮಾದಕವಸ್ತು ಬಳಕೆ ಆರೋಪವಿದೆ ಎನ್ನಲಾಗಿದೆ. ಈ ಬಗ್ಗೆ ಒಡನಾಡಿ ಸಂಸ್ಥಾಪಕ ಸ್ಟ್ಯಾನ್ಲಿ ಮಾಹಿತಿ ನೀಡಿದ್ದು, ಮಕ್ಕಳನ್ನು ಅಕ್ರಮವಾಗಿ ದತ್ತು ನೀಡುವುದು, ಮಾನವ ಸಾಗಣೆ, ಅತ್ಯಾಚಾರ ಕೊಲೆ ಆರೋಪ ಮಾಡಿದ್ದಾರೆ. ಮುರುಘಾ ಶರಣರು ಡ್ರಗ್ಸ್ ತೆಗೆದುಕೊಂಡಿರುವ ಅನುಮಾನ ಇದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.