Breaking News

ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಸಿದ್ದರಾಮಯ್ಯ ಗರಂ!

Spread the love

ಹುಬ್ಬಳ್ಳಿ: ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ನಗರದ ಹೊಟೇಲ್‌ವೊಂದಕ್ಕೆ ಆಗಮಿಸಿದ್ದರು. ಈ ವೇಳೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಕಾಂಗ್ರೆಸ್ ಸ್ಥಳೀಯ ಮುಖಂಡ ಗಿರೀಶ ಗದಿಗೆಪ್ಪಗೌಡರ ಅವರು ‘ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು.

ಇದಕ್ಕೆ ಪ್ರತಿಯಾಗಿ ಗದಿಗೆಪ್ಪಗೌಡರ ಜತೆ ಬಂದವರು ‘ಹೌದೋ ಹುಲಿಯಾ’ ಎಂದು ಪ್ರತಿಕ್ರಿಯಿಸಿದರು. ಈ ಸಂಗತಿ ಸಿದ್ದರಾಮಯ್ಯ ಅವರನ್ನು ಕೆರಳಿಸಿತು. ಘೋಷಣೆ ಕೂಗುವವರನ್ನು ಸುಮ್ಮನಿರುವಂತೆ ಗದರಿದರು. ಬಳಿಕ ಘೋಷಣೆ ಕೂಗುವವರು ತಣ್ಣಗಾದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ