Breaking News
Home / ಜಿಲ್ಲೆ / ಬೆಂಗಳೂರು / ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಕಂದಾಯ ಗ್ರಾಮ’ವಾಗಿ ಘೋಷಣೆ

ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಕಂದಾಯ ಗ್ರಾಮ’ವಾಗಿ ಘೋಷಣೆ

Spread the love

ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ.

ಈ ಮೂಲಕ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಕಂದಾಯ ಇಲಾಖೆಯ ( Revenue Department ) ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ನೆಲೆಗೊಂಡಿರುವಂತ ಜನವಸತಿಗಳ ಪೈಕಿ ಹಲವಾರು ಜನವಸತಿಗಳು ವಿಶೇಷವಾಗಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ನಾಯಕರ ಹಟ್ಟಿ, ಕುರುಬರ ಹಟ್ಟಿ, ಹಾಡಿ, ಮಜರೆ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಜನವಸತಿಗಳು ದಾಖಲೆರಹಿತವಾಗಿಯೇ ಸಮಾಜದ ಮುಖ್ಯ ವಾಹಿನಿಗೆ ಬರದೇ ಉಳಿದುಕೊಂಡಿರುತ್ತಾರೆ ಎಂದಿದ್ದಾರೆ.

ಇನ್ನೂ ಇಂತಹ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿನ ನಿವಾಸಿಗಳಿಗೆ ವಾಸ್ತವ್ಯದ ಹಕ್ಕು ದಾಖಲೆಗಳನ್ನು ಒದಗಿಸಿ, ಆ ಕುಟುಂಬಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹೇಳಿದ್ದಾರೆ.

ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಲ ಕಾಲಕ್ಕೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಸರ್ಕಾರವು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕಲಂ 38ಎ ಮತ್ತು ನಿಯಮ 9ಸಿ ಸೇರ್ಪಡೆಗೊಳಿಸುವ ಮೂಲಕ ಖಾಸಗಿ ಜಮೀನಿನಲ್ಲಿ ನೆಲೆಗೊಂಡಿರುವ ದಾಖಲೆರಹಿತ ಜನವಸತಿ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

 

Dailyhunt

Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ