Breaking News

ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ

Spread the love

ಬೆಂಗಳೂರು: ಇನ್ನು ಮುಂದೆ ಮಾರ್ಕೆಟ್, ಮಾಲ್, ಅಂಗಡಿ ಮುಂದೆ ಕ್ಯೂ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ. ಸಾಮಾಜಿಕ ಅಂತರ ಮರೆತರೆ ಕಟ್ಟುನಿಟ್ಟನ ಕ್ರಮ ಗ್ಯಾರೆಂಟಿ.

ಮಾಲ್, ಮಾರ್ಕೆಟ್‍ಗಳಲ್ಲೂ ಕೊರೋನಾ ನಿಯಮ ಬಿಗಿಯಾಗಿದ್ದು ಅಂಗಡಿ ಎದುರು ಕನಿಷ್ಠ 6 ಅಡಿ ಅಂತರ ಇರಬೇಕು. ಸಾಮಾಜಿಕ ಅಂತರ ಪಾಲಿಸದಿದ್ರೆ ಗ್ರಾಹಕರಿಗೆ ದಂಡ ಹಾಕಲಾಗುತ್ತದೆ. ಗ್ರಾಹಕರ ಜೊತೆಗೆ ಮಾಲೀಕರಿಗೂ ದಂಡ ಹಾಕಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. 

ಮದುವೆ ಸಮಾರಂಭಕ್ಕೆ 50 ಮಂದಿಗಷ್ಟೇ ಅವಕಾಶ ನೀಡಲಾಗಿದೆ. ಸಭೆ ಸಮಾರಂಭಗಳಲ್ಲೂ 50 ಜನ ಮೀರುವಂತಿಲ್ಲ. ಈ ನಿಯಮ ಉಲ್ಲಂಘಿಸಿದರೆ ಕಲ್ಯಾಣ ಮಂಟಪದ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕವಾಗಿ 5ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಅಂತ್ಯಸಂಸ್ಕಾರದ ಮನೆಯಲ್ಲಿ 20 ಜನರಿಗಷ್ಟೇ ಅನುಮತಿ ನೀಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಲಕ್ಷದ ಗಡಿ ದಾಟಿದೆ. ಬುಧವಾರ 8,856 ಮಂದಿಗೆ ಸೋಂಕು ತಗುಲಿದ್ದು, 8,890 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,01,767ಕ್ಕೆ ಏರಿಕೆಯಾಗಿದೆ. ಈ ಪೈಕಿ 1,07,616 ಸಕ್ರಿಯ ಪ್ರಕರಣಗಳಿದ್ದು, 821 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ ಕೊರೊನಾದಿಂದಾಗಿ ರಾಜ್ಯದಲ್ಲಿ 8,864 ಜರನು ಪ್ರಾಣ ಕಳೆದುಕೊಂಡಿದ್ದಾರೆ.

 


Spread the love

About Laxminews 24x7

Check Also

ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!

Spread the loveಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ