Breaking News
Home / ಜಿಲ್ಲೆ / ಬೆಂಗಳೂರು / ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ

ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ

Spread the love

ಬೆಂಗಳೂರು: ಇನ್ನು ಮುಂದೆ ಮಾರ್ಕೆಟ್, ಮಾಲ್, ಅಂಗಡಿ ಮುಂದೆ ಕ್ಯೂ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ. ಸಾಮಾಜಿಕ ಅಂತರ ಮರೆತರೆ ಕಟ್ಟುನಿಟ್ಟನ ಕ್ರಮ ಗ್ಯಾರೆಂಟಿ.

ಮಾಲ್, ಮಾರ್ಕೆಟ್‍ಗಳಲ್ಲೂ ಕೊರೋನಾ ನಿಯಮ ಬಿಗಿಯಾಗಿದ್ದು ಅಂಗಡಿ ಎದುರು ಕನಿಷ್ಠ 6 ಅಡಿ ಅಂತರ ಇರಬೇಕು. ಸಾಮಾಜಿಕ ಅಂತರ ಪಾಲಿಸದಿದ್ರೆ ಗ್ರಾಹಕರಿಗೆ ದಂಡ ಹಾಕಲಾಗುತ್ತದೆ. ಗ್ರಾಹಕರ ಜೊತೆಗೆ ಮಾಲೀಕರಿಗೂ ದಂಡ ಹಾಕಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. 

ಮದುವೆ ಸಮಾರಂಭಕ್ಕೆ 50 ಮಂದಿಗಷ್ಟೇ ಅವಕಾಶ ನೀಡಲಾಗಿದೆ. ಸಭೆ ಸಮಾರಂಭಗಳಲ್ಲೂ 50 ಜನ ಮೀರುವಂತಿಲ್ಲ. ಈ ನಿಯಮ ಉಲ್ಲಂಘಿಸಿದರೆ ಕಲ್ಯಾಣ ಮಂಟಪದ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕವಾಗಿ 5ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಅಂತ್ಯಸಂಸ್ಕಾರದ ಮನೆಯಲ್ಲಿ 20 ಜನರಿಗಷ್ಟೇ ಅನುಮತಿ ನೀಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಲಕ್ಷದ ಗಡಿ ದಾಟಿದೆ. ಬುಧವಾರ 8,856 ಮಂದಿಗೆ ಸೋಂಕು ತಗುಲಿದ್ದು, 8,890 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,01,767ಕ್ಕೆ ಏರಿಕೆಯಾಗಿದೆ. ಈ ಪೈಕಿ 1,07,616 ಸಕ್ರಿಯ ಪ್ರಕರಣಗಳಿದ್ದು, 821 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ ಕೊರೊನಾದಿಂದಾಗಿ ರಾಜ್ಯದಲ್ಲಿ 8,864 ಜರನು ಪ್ರಾಣ ಕಳೆದುಕೊಂಡಿದ್ದಾರೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ