Breaking News

ಚಂದ್ರು ಅಪಹರಿಸಿ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ : ರೇಣುಕಾಚಾರ್ಯ ಆರೋಪ

Spread the love

ದಾವಣಗೆರೆ : ನನ್ನ ತಮ್ಮನ ಮಗ ಚಂದ್ರುವನ್ನು ಅಪರಿಹರಿಸಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

 

ಇಂದು ಶಾಸಕ ರೇಣುಕಾಚಾರ್ಯ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಚಂದ್ರುವನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ. ಶಿಖಂಡಿಗಳು ನನ್ನ ಮೇಲೆ ಸೇಡಿನಿಂದ ಚಂದ್ರು ಕೊಂದಿದ್ದಾರೆ ಎಂದು ಹೇಳಿದ್ದಾರೆ.

ತುಳು ಮಿಶ್ರಿತ ಕನ್ನಡದಲ್ಲಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು. ಏನೇ ಬೆದರಿಕೆ ಹಾಕಿದರೂ ನಾನು ಬಗ್ಗಲಿಲ್ಲ. ಅದ್ಧೂರಿಯಿಂದ ಗಣೇಶೋತ್ಸವ ಹಾಗೂ ಸಾವರ್ಕರ್ ರಥಯಾತ್ರೆ ಮಾಡಿದ್ದೆ. ನನಗೆ ಕೊಲೆ ಬೆದರಿಕೆ ಬಂದು 1 ವರ್ಷ ಆಗಿತ್ತು. ಈಗ ಸದಾಶಿವನಗರ ಪೊಲೀಸರು ತನಿಖೆ ಮಾಡಬೇಕು ಎಂದು ಹೇಳಿದ್ದಾರೆ ಎಂದು ಮತ್ತೊಮ್ಮೆ ಪರೋಕ್ಷವಾಗಿ ಪೊಲೀಸರ ತನಿಖೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ