Breaking News

ಪೊಲೀಸ್ ಮನೆಗೇ ಹೊಕ್ಕ ಕಳ್ಳರು; ಪರಾರಿ ಆಗುವಾಗ ಅಡ್ಡಬಂದ ಎಎಸ್​ಐ ಪುತ್ರನಿಗೆ ಗುಂಡೇಟು..

Spread the love

ಪೊಲೀಸೊಬ್ಬರ ಮನೆ ಮೇಲೆಯೇ ಕಳ್ಳರು ದಾಳಿ ಮಾಡಿದ್ದು, ಅಡ್ಡ ಬಂದ ಎಎಸ್​​ಐ ಹಾಗೂ ಅವರ ಪುತ್ರನತ್ತ ಶೂಟ್ ಮಾಡಿದ್ದು, ಎಎಸ್​​ಐ ಪುತ್ರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕು ಪೇರೇಸಂದ್ರ ಗ್ರಾಮದಲ್ಲಿ ಎಎಸ್​​ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ.

ಇವರು ಬಾಗೇಪಲ್ಲಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮನೆಗೆ ನುಗ್ಗಿದ್ದ ಕಳ್ಳರು, ಮನೆಯಲ್ಲಿದ್ದ ಎಎಸ್‌ಐ ಪತ್ನಿ ಹಾಗೂ ಸೊಸೆಗೆ ಬೆದರಿಸಿ ಮಾಂಗಲ್ಯ ಸರ ದೋಚಿದ್ದಾರೆ. ಅಲ್ಲದೆ ನಗದು-ಚಿನ್ನಾಭರಣ ಸುಲಿಗೆ ಮಾಡಿಕೊಂಡು ಪರಾರಿಯಾಗಲು ಮುಂದಾಗಿದ್ದರು.

ಅದೇ ಸಮಯಕ್ಕೆ ಹೊರಗಡೆಯಿಂದ ಎಎಸ್​​ಐ ಹಾಗೂ ಪುತ್ರ ಮನೆಗೆ ಬಂದಿದ್ದು, ಕಳ್ಳರನ್ನು ತಡೆದು ಹಿಡಿಯಲು ಯತ್ನಿಸಿದ್ದರು. ಆಗ ಇವರತ್ತ ಕಳ್ಳರು ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ನಾರಾಯಣಸ್ವಾಮಿ ಅವರ ಪುತ್ರ ಶರತ್​ಗೆ ಗುಂಡೇಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. 


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ