Breaking News

ಜನಾರ್ದನರೆಡ್ಡಿ ರಾಜಕೀಯದಲ್ಲಿ ಸಕ್ರಿಯ ಆಗುತ್ತಿದ್ದಂತೆ ಗಣಿ ಅಕ್ರಮ ಕೇಸ್‌ಗಳಿಗೆ ಸಿಕ್ಕಿತು ವೇಗ!

Spread the love

ಳ್ಳಾರಿ: ಕಾಕತಾಳೀಯವೋ ಏನೋ… ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಮತ್ತೆ ಸಕ್ರಿಯ ಆಗುತ್ತಿದ್ದಂತೆ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ವೇಗ ಸಿಕ್ಕಿದಂತಾಗಿದೆ. ಸುಪ್ರಿಂ ಕೋರ್ಟ್​​ ಸೂಚನೆ ಮೇರೆಗೆ ಇಂದಿನಿಂದ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ತ್ವರಿತ ವಿಚಾರಣೆ ನಡೆಸಲಿದೆ.

 

ಹೈದ್ರಾಬಾದ್​​ನಲ್ಲಿರುವ ಸಿಬಿಐ ವಿಶೇಷ ಕೋರ್ಟ್​ನಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ‌ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸಾಕ್ಷಿ ಉದ್ಯಮಿ ಟಪಾಲ್ ಏಕಾಂಬರಂಗೆ ನ್ಯಾಯಾಲಯಕ್ಕೆ​​ಗೆ ಹಾಜರಾಗುವಂತೆ ಸಮನ್ಸ್​​ ನೀಡಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಸಾಕ್ಷಿಗಳಿದ್ದು, ನ್ಯಾಯಾಲಯ ಒಬ್ಬರ ನಂತರ ಒಬ್ಬರ ವಿಚಾರಣೆ ನಡೆಸಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಲ್ಲಿ ವಿಚಾರಣೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐ ನ್ಯಾಯಾಲಯಕ್ಕೆ ಸೂಚನೆ ನೀಡಿತ್ತು. ಹೀಗಾಗಿ, ಇದೀಗ ​12 ವರ್ಷಗಳ ಹಿಂದಿನ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಮತ್ತೆ ವೇಗ ಬಂದಿದೆ.


Spread the love

About Laxminews 24x7

Check Also

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

Spread the loveಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ