Breaking News
Home / ರಾಜಕೀಯ / ಪ್ರಮೋದ್ ಮುತಾಲಿಕ್ ಮೇಲೆ ಕಾನೂನು ಕ್ರಮ ಜರುಗಿಸಬೇಕು : ವಿಜಯ ಗುಂಟ್ರಾಳ

ಪ್ರಮೋದ್ ಮುತಾಲಿಕ್ ಮೇಲೆ ಕಾನೂನು ಕ್ರಮ ಜರುಗಿಸಬೇಕು : ವಿಜಯ ಗುಂಟ್ರಾಳ

Spread the love

ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕೋಮು ಗಲಭೆಗೆ ಪ್ರಚೋದನೆಕಾರಿ ಹೇಳಿಕೆ ನೀಡುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಎಐಎಂಐಎಂ ಪಕ್ಷದ ವಿಜಯ ಗುಂಟ್ರಾಳ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಅವರಿಗೆ ಕಾನೂನಿನ ಕುರಿತು ಗೌರವವಿಲ್ಲ. ಅಲ್ಲದೇ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿಯೂ ಕೂಡಾ ಅವರಿಗೆ ನಂಬಿಕೆ ಇಲ್ಲ ಎಂದು ಹರಿಹಾಯ್ದರು.

ನಗರದ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗಿದ್ದು, ಯಾವುದೇ ಉದ್ದೇಶದಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿಲ್ಲ. ಈದ್ಗಾ ಮೈದಾನದಲ್ಲಿ ನಮ್ಮ ಮನವಿಯಂತೆ ಹು-ಧಾ ಪಾಲಿಕೆ ಟಿಪ್ಪು ಸುಲ್ತಾನ್ ಆಚರಣೆಗೆ ಅವಕಾಶ ನೀಡಿದ್ದು, ಪಾಲಿಕೆಗೆ ಧನ್ಯವಾದ ತಿಳಿಸುವುದಾಗಿ ಅವರು ಹೇಳಿದರು.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ