Breaking News
Home / ರಾಜಕೀಯ / ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ

ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ

Spread the love

ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ ಜರುಗಿಸಿದ ಕಾಂಗ್ರೆಸ್ ಕಾರ್ಯಕರ್ತರು.

ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿ ಶಾಸಕ ಸತೀಶ ಜಾರಕಿಹೋಳಿ ಯವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಚಾಯತ ಸದಸ್ಯ ಮಂಜುನಾಥ ಪಾಟೀಲ ನಿಪ್ಪಾಣಿಯಲ್ಲಿ ಜರುಗಿದ ಬುದ್ದ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಯಮಕನಮರ್ಡಿ ಶಾಸಕ ಸತೀಶ ಜಾರಕಿಹೋಳಿ ಹಿಂದೂ ಶಬ್ದಕ್ಕೆ ಅವಮಾನ ಮಾಡಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡರು ವಿರೋಧಿಸಿದ್ದಾರೆ ಆದರೆ ಜಾರಕಿಹೋಳಿಯವರು ಮಾತನಾಡಿದ್ದು ಹಲವಾರು ಗ್ರಂಥ ಮತ್ತು ಶಬ್ದಕೋಶದಲ್ಲಿ ಉಲ್ಲೇಖ ಇದೆ.ಈ ಕುರಿತು ಚರ್ಚಿಸಲು ಬಹಿರಂಗವಾಗಿ ಅವ್ಹಾನವನ್ನು ಶಾಸಕರು ನೀಡಿದ್ದಾರೆ ಆದರೆ ಬಿ ಜೇ ಪಿ ಪಕ್ಷದವರು ರಾಜಕೀಯ ಲಾಭ ಪಡೆಯಲು ಇಲ್ಲ ಸಲ್ಲದ ಹೇಳಿಕೆ ನೀಡಿ ಸಂಚು ರೂಪಿಸುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದು ತಾವು ಮಾತನಾಡಿದ ಶಬ್ದವನ್ನು ಹಿಂದಕ್ಕೆ ಪಡೆದಿದ್ದಾರೆ ಆದರೆ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ ಕೂಡಲೇ ಸರ್ಕಾರ ಹಿಂದು ಪದದ ಮೂಲ ತನಿಖೆ ಮಾಡಬೇಕು ಹಾಗೂ ನಮ್ಮ ಶಾಸಕರ ವಿರುದ್ದ ಮಾಡಿರುವ ಸಂಚು ಇಲ್ಲಿಗೆ ನಿಲ್ಲಬೇಕು ಇಲ್ಲವಾದರೆ ನವೆಂಬರ್ 14 ರಂದು ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವದು ಎಂದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ