Breaking News

ಮುಧೋಳ: ಸಿಮೆಂಟ್‌, ಕಬ್ಬಿಣ ಬಳಸದೇ ನಿರ್ಮಾಣವಾಗಿದೆ ಈ ದೇವಾಲಯ

Spread the love

ಬಾಗಲಕೋಟೆ, ನವೆಂಬರ್ 9: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುದ್ದಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಜೆ.ಕೆ. ಸಿಮೆಂಟ್ ಕಂಪನಿ ಆವರಣದಲ್ಲಿ ಪುರಾತನ ವಾಸ್ತುಶಿಲ್ಪ ಕಲೆಯ ಅನುಸಾರ ಯದುರೇಶ್ವರ ಶಿವ ಮಂದಿರವನ್ನು ಕಟ್ಟಲಾಗಿದೆ. ವಿಶೇಷವೆಂದರೆ ಈ ದೇವಾಲಯದ ನಿರ್ಮಾಣಕ್ಕೆ ಸಿಮೆಂಟ್‌, ಕಬ್ಬಿಣವನ್ನು ಬಳಸದೇ ಕಟ್ಟಲಾಗಿದ್ದು, ಪ್ರವಾಸಿ ಕೇಂದ್ರವಾಗಿ ಗಮನ ಸೆಳೆಯುತ್ತಿದೆ.

 

ಈ ಅತ್ಯಾಕರ್ಷಕ ಯದುರೇಶ್ವರ ಶಿವನ ದೇವಾಲಯ ಲೋಕಾರ್ಪಣೆಗೊಂಡು ಮೂರು ವರ್ಷಗಳಾಗಿವೆ. ಶಿವಭಕ್ತಾದಿಗಳಾದಿಯಾಗಿ ಮಕ್ಕಳು , ಕುಟುಂಬದವರು ಹೋಗಿ ಯದುರೇಶ್ವರ ಮಹದೇವ ಸ್ವಾಮಿ ದರ್ಶನ ಪಡೆಯಲು ಇಲ್ಲಿಗೆ ಆಗಮಿಸುತ್ತಿದ್ದು, ಪ್ರಮುಖ ಧಾರ್ಮಿಕ ಸ್ಥಳವಾಗಿ ರೂಪುಗೊಳ್ಳುತ್ತಿದೆ.

 

ರಾಜಸ್ಥಾನದ ಬನ್ನಿ ಪಹಾರಪುರದ ಪಿಂಕ್ ಕಲ್ಲಿನಲ್ಲಿ ಕೆತ್ತಿರುವ ಅದ್ಭುತ ಕಲಾ ಚಿತ್ರಗಳು ಪ್ರವಾಸಿಗರು ಹಾಗೂ ಭಕ್ತರ ಮನ ಸೂರೆಗೊಳ್ಳುತ್ತಿದೆ . ಮಂದಿರದ ಕಂಬಗಳು , ಮೇಲ್ಬಾವಣಿಯಲ್ಲಿ ಕುಸುರಿ ಕಲೆ ಅರಳಿದೆ. ರಾಜಸ್ಥಾನದಲ್ಲೇ ಮಂದಿರದ ಕಂಬಗಳನ್ನು ಕೆತ್ತಿಸಿಕೊಂಡು ಇಲ್ಲಿಗೆ ತರಲಾಗಿದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ನರ್ಮದಾ ನದಿ ತಟದಿಂದ ಶಿವಲಿಂಗವನ್ನು ತರಿಸಿ ಇಲ್ಲಿ ಪ್ರತಿಷ್ಠಾಪಿಸಲಾಗಿದೆ. ಕಾರ್ಖಾನೆ ಹಾಗೂ ವಸತಿ ಸಮುಚ್ಚಯದ ಮಧ್ಯೆ ನಿರ್ಮಾಣಗೊಂಡಿರುವ ದೇವಸ್ಥಾನವನ್ನು ಅಹ್ಮದಬಾದ್ ನಗರದ ಇಂಜಿನಿಯರ್ ಸಿ.ಬಿ. ಸೋಮಾಪುರ ವಿನ್ಯಾಸ ಮಾಡಿದ್ದಾರೆ.

ದೇವಸ್ಥಾನದ ಸುತ್ತ 6 ಎಕರೆ ಜಾಗದಲ್ಲಿ ಉದ್ಯಾನ11,700 ಚದುರ ಅಡಿಗಳಲ್ಲಿ ಮಂದಿರದ ಕಟ್ಟಡವನ್ನು ಕೇವಲ 15ತಿಂಗಳಲ್ಲಿ ಪೂರ್ಣಗೊಳಿಸಿದ್ದಾರೆ . ಅಲ್ಲದೆ ದೇವಸ್ಥಾನದ ಸುತ್ತ 6 ಎಕರೆ ಜಾಗದಲ್ಲಿ ವಿಶಾಲವಾದ ಉದ್ಯಾನ ನಿರ್ಮಿಸಲಾಗಿದ್ದು , ಹೂ ಗಿಡ, ಹಚ್ಚಹಸುರಿನ ಉದ್ಯಾನವನ ಕಣ್ಮನ ಸೆಳೆಯುತ್ತದೆ. ಯದುರೇಶ್ವರ ದೇವಾಲಯ ಶ್ರದ್ಧಾಭಕ್ತಿಯ ಕೇಂದ್ರವಾಗಿ ಕಂಗೊಳಿಸುತ್ತಿದೆ.

ಸಿಮೆಂಟ್, ಕಬ್ಬಿಣ ಬಳಸದೇ ದೇವಾಲಯ ನಿರ್ಮಾಣ

ಪುರಾತನ ದೇಗುಲಗಳಂತೆ ವಾಸ್ತುಶಾಸದ ಅನುಸಾರ, ಸಿಮೆಂಟ್ ಹಾಗೂ ಕಬ್ಬಿಣ ಬಳಸದೆ ದೇವಸ್ಥಾನವನ್ನು ನಿರ್ಮಿಸಿದ್ದು , ನೂರಾರು ವರ್ಷ ಬಾಳಿಕೆ ಬರುತ್ತದೆ . ದೇವಾಲಯ ನಿರ್ಮಾಣಕ್ಕೂ ಮುನ್ನ ಜೆ.ಕೆ. ಗ್ರೂಪ್‌ನ ಮಾಲೀಕ ಯದುಪತಿ ಸಿಂಘಾನಿಯಾ, ನಿರ್ದೇಶಕ ಮಾಧವಕೃಷ್ಣ ಸಿಂಘಾನಿಯಾ, ರಾಘವಪತ್ತ ಸಿಂಘಾನಿಯಾ ಮುತುವರ್ಜಿ ವಹಿಸಿ ಹಲವಾರು ಮಂದಿರಗಳನ್ನು ಪರಿವೀಕ್ಷಿಸಿ, ವಿಶಿಷ್ಟವಾದ ನೀಲಿ ನಕಾಶೆಯನ್ನು ಹಾಕಿಸಿ ಮಂದಿರ ನಿರ್ಮಾಣಕ್ಕೆ ನಿರ್ದೇಶನ ನೀಡಿದ್ದರು ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ