Breaking News

ಹಿಂದೂ’ ಪದ ಹೇಳಿಕೆ ವಿವಾದ : ‘ಸತೀಶ್ ಜಾರಕಿಹೊಳಿ’ ಪರ ನಟ ‘ಚೇತನ್’ ಬ್ಯಾಟ್..ಹೇಳಿದ್ದೇನು ಗೊತ್ತಾ..?

Spread the love

ಬೆಂಗಳೂರು : ಇತ್ತೀಚೆಗೆ ಕಾಂತಾರ ಸಿನಿಮಾ ವಿವಾದ ಎಬ್ಬಿಸಿದ ನಟ ಚೇತನ್ ಇದೀಗ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ.

ಹಿಂದೂ ಪದದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ ಪರ ನಟ ಚೇತನ್ ಬ್ಯಾಟ್ ಮಾಡಿದ್ದು, ಹಿಂದೂ ಪದದ ಅಧ್ಯಯನದ ಅಗತ್ಯವಿದೆ ಎಂದು ಹೇಳಿದ್ದಾರೆ.

 

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಚೇತನ್, ಶಾಸಕ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಆರ್ಟಿಕಲ್-19 ರ ಅಭಿವ್ಯಕ್ತಿ ಸ್ವಾತಂರ್ತ್ಯಕ್ಕನುಗುಣವಾಗಿದೆ. ಪರ್ಷಿಯನ್ ಪದವಾದ ಹಿಂದೂವಿನ ಬಗ್ಗೆ ಹೆಚ್ಚಿನ ಸಂಶೋಧನೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಭವಿಷ್ಯದಲ್ಲಿ ಜಾರಕಿಹೊಳಿ ಅವರು ರಾಜಕೀಯ ಲಾಭಕ್ಕಾಗಿ ಹಿಂದೂ ಕಾಂಗ್ರೆಸ್ ಜೊತೆ ನಿಲ್ಲುವುದರ ಬದಲಾಗಿ ಸಮನತಾವಾದಿಗಳಾದ ನಮ್ಮೊಂದಿಗೆ ಮತ್ತು ಸತ್ಯದೊಂದಿಗೆ ನಿಲ್ಲುತ್ತಾರೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.

 


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ