ಜೀವನದಲ್ಲಿ ಜಿಗುಪ್ಸೆ, ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಗಣೇಶ ನಗರದ ಬಳಿ ರೇಲ್ವೇ ಹಳಿಯ ಮೇಲೆ ನಡೆದಿದೆ.
ಗಡಗಿ ಲೇಔಟ್ ನಿವಾಸಿ ಗುರುರಾಜ ಪುರೋಹಿತ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಮುಂಬೈ ಗದಗ ಮಾರ್ಗ ಮದ್ಯೆ ಸಂಚರಿಸೋ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ರೇಲ್ವೆ ಪೊಲೀಸರ ಭೇಟಿ ನೀಡಿದ್ದಾರೆ. ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.