ಕಿತ್ತೂರು ಪೊಲೀಸ್ ಸಬ್ಇನ್ಸಪೇಕ್ಟರ್ ಎಚ್ಎಲ್ ಧರ್ಮಟ್ಟಿ, ಬೈಲಹೊಂಗಲ ಡಿಎಸ್ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಖಾನಾಪೂರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಶಿವಾನಂದ ಶಿವನೆಪ್ಪ ಕಾದ್ರೋಳ್ಳಿಯನ್ನು ಬಂಧಿಸಿ ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ೬ ಕಿಲೋ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಮಾರಾಟದಿಂದ ಬಂದ ೧ ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ.
ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.
ಕಿತ್ತೂರು ಮತ್ತು ಖಾನಾಪೂರ ಪೊಲೀಸರ ಕಾರ್ಯವನ್ನು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಪ್ರಶಂಸಿಸಿದ್ದಾರೆ.