Breaking News
Home / ರಾಜಕೀಯ / ಬಿಜೆಪಿ ಅಭಿವೃದ್ದಿ ಕಾರ್ಯಕ್ರಮಗಳಿಂದ ಜೆಡಿಎಸ್ ನಾಯಕರಿಗೆ ಹೊಟ್ಟೆಕಿಚ್ಚು; ಪ್ರಹ್ಲಾದ ಜೋಶಿ

ಬಿಜೆಪಿ ಅಭಿವೃದ್ದಿ ಕಾರ್ಯಕ್ರಮಗಳಿಂದ ಜೆಡಿಎಸ್ ನಾಯಕರಿಗೆ ಹೊಟ್ಟೆಕಿಚ್ಚು; ಪ್ರಹ್ಲಾದ ಜೋಶಿ

Spread the love

ಹುಬ್ಬಳ್ಳಿ: ಬಿಜೆಪಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ‌ ಹಾಗೂ ಸಾ.ರಾ. ಮಹೇಶ ಅವರಿಗೆ ಹೊಟ್ಟೆಕಿಚ್ಚಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿಯವರ ಕುಟುಂಬ ಸರ್ಕಾರದ ಹಲವು ಉನ್ನತ ಹುದ್ದೆಯಲ್ಲಿದ್ದರೂ ಸಹ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿರಲಿಲ್ಲ.

ಯಾವುದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಬಿಜೆಪಿ ಅವರ ಅಭಿವೃದ್ಧಿ ಕಾರ್ಯ ಮಾಡುತ್ತಿರುವುದು ಅವರಿಗೆ ಸಹಿಸಲಾಗುತ್ತಿಲ್ಲ ಎಂದರು.

ಕೆಂಪೆಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರನ್ನು ಆಮಂತ್ರಿಸಿಲ್ಲ ಎಂಬುದು ಸುಳ್ಳು. ಸ್ವತಃ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿದ್ದಾರೆ. ಆದರೂ ಅವರು ಬಂದಿಲ್ಲ. ಯಾಕೆ ಬಂದಿಲ್ಲ ಎಂದು ಗೊತ್ತಿಲ್ಲ ಎಂದರು.

ಇನ್ನೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿಯವರ ನೆರಳು ತಾಕಿದೆ. ಪಾದಯಾತ್ರೆಯಲ್ಲಿ ಅವರೊಂದಿಗೆ ಭಾಗವಹಿಸಿದಾಗಿನಿಂದ ಅವರು ರಾಹುಲ್ ಗಾಂಧಿಯವರ ಹಾಗೇ ಮಾತನಾಡುತ್ತಿದ್ದಾರೆ. ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಕೇಳುತ್ತಿದ್ದು, ಕಳೆದ 50 ವರ್ಷದಲ್ಲಿ ಮಾಡದ ಅಭಿವೃದ್ಧಿ ಕಾರ್ಯ ಕೇವಲ 7 ವರ್ಷದಲ್ಲಿ ಬಿಜೆಪಿ ಮಾಡಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ