Breaking News

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯ ಯೋಜನೆಗಳ ಜಾರಿಗೆ ಹೊಸ ನೀತಿ

Spread the love

ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಲು ಯೋಜನೆಗಳ ಜಾರಿಗೆ ಹೊಸ ನೀತಿ ಜಾರಿಗೆ ತರಲಾಗುವುದು.

ಕನಿಷ್ಠ ಸೌಲಭ್ಯಗಳನ್ನು ನೀಡದೆ ಅಸಂಘಟಿತ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ವಿವಿಧ ಯೋಜನೆಗಳ ಸೌಲಭ್ಯ ದೊರಕಿಸಿಕೊಡಲು ಹೊಸ ನೀತಿ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

 

ರೆಡಿಮೇಡ್ ಗಾರ್ಮೆಂಟ್ಸ್, ಆಪ್ ಆಧಾರಿತ ವಾಹನಗಳ ಚಾಲಕರು, ಆಹಾರ ಹಾಗೂ ಇತರೆ ವಸ್ತುಗಳ ಡೆಲಿವರಿ ನೀಡುವವರು, ನಿರ್ಮಾಣ ಕ್ಷೇತ್ರ ಮೊದಲಾದ ವಲಯಗಳ ಕೆಲಸ ಮಾಡುತ್ತಿರುವ ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವುದು ಹೊಸ ನೀತಿಯ ಉದ್ದೇಶವಾಗಿದೆ.

ಅಸಂಘಟಿತ ವಲಯದ ಕಾರ್ಮಿಕರಿಗೆ ಭವಿಷ್ಯ ನಿಧಿ ಸೌಲಭ್ಯ, ಆರೋಗ್ಯ ವಿಮೆ, ಇಎಸ್‌ಐ, ವಾರದ ರಜೆ ಮೊದಲಾದವುಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ನೌಕರರು ಕೆಲಸ ಮಾಡುವ ಸಂಸ್ಥೆಗಳಿಂದ ಹಣಕಾಸಿನ ನೆರವು ಪಡೆದು ಸೌಲಭ್ಯ ಜಾರಿಗೊಳಿಸಲಾಗುವುದು. ಸಂಘಟಿತ ವಲಯದ ಕಾರ್ಮಿಕರಿಗೆ ಸೌಲಭ್ಯಗಳು ಸಿಗುತ್ತಿರುವಂತೆಯೇ ಅಸಂಘಟಿತ ವಲಯದವರೆಗೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಮೀಕ್ಷೆ ಆರಂಭವಾಗಿದ್ದು ಹೊಸ ನೀತಿಯನ್ನು ಜಾರಿಗೊಳಿಸಲು ಕಾರ್ಮಿಕ ಇಲಾಖೆ ನಿಯಮಗಳನ್ನು ರೂಪಿಸುತ್ತಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ