Breaking News

ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

Spread the love

ಬಾಗಲಕೋಟೆ: ಕೃಷಿ ಸಂಬಂಧಿತ ಚಟುವಟಿಕೆಗಳ ಸಂದರ್ಭ ಸಣ್ಣ ಎಡವಟ್ಟಿನಿಂದಾಗಿ ಅಂಥ ಕೆಲಸಗಾರರು ಪ್ರಾಣ ಕಳೆದುಕೊಂಡ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಇಂದು ಅಂಥದ್ದೇ ಇನ್ನೊಂದು ಪ್ರಕರಣ ಸಂಭವಿಸಿದ್ದು, ಕೃಷಿ ಚಟುವಟಿಕೆ ವೇಳೆ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.

 

ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಈ ದುರಂತದಲ್ಲಿ ರೇಣುಕಾ ಮಾದರ (45) ಎಂಬಾಕೆ ಸಾವಿಗೀಡಾಗಿದ್ದಾರೆ. ಈಕೆ ಕೂಲಿ ಕೆಲಸಕ್ಕಾಗಿ ಬೇರೆ ಕಡೆಯಿಂದ ಬಂದಿದ್ದರು.

 

ಕೆಲಸದ ವೇಳೆ ಇವರು ಗೋವಿನಜೋಳ ರಾಶಿ ಯಂತ್ರಕ್ಕೆ ಹಾಕುವಾಗ ಸೀರೆ ಸಿಲುಕಿಕೊಂಡಿದ್ದರಿಂದ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಸೀರೆ ಸಿಕ್ಕಿಹಾಕಿಕೊಂಡಿದ್ದರಿಂದ ದೇಹವೂ ಯಂತ್ರಕ್ಕೆ ಸಿಲುಕಿ, ಛಿದ್ರಗೊಂಡಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ