Home / ಜಿಲ್ಲೆ / ಬಾಗಲಕೋಟೆ / ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

Spread the love

ಬಾಗಲಕೋಟೆ: ಕೃಷಿ ಸಂಬಂಧಿತ ಚಟುವಟಿಕೆಗಳ ಸಂದರ್ಭ ಸಣ್ಣ ಎಡವಟ್ಟಿನಿಂದಾಗಿ ಅಂಥ ಕೆಲಸಗಾರರು ಪ್ರಾಣ ಕಳೆದುಕೊಂಡ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಇಂದು ಅಂಥದ್ದೇ ಇನ್ನೊಂದು ಪ್ರಕರಣ ಸಂಭವಿಸಿದ್ದು, ಕೃಷಿ ಚಟುವಟಿಕೆ ವೇಳೆ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.

 

ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಈ ದುರಂತದಲ್ಲಿ ರೇಣುಕಾ ಮಾದರ (45) ಎಂಬಾಕೆ ಸಾವಿಗೀಡಾಗಿದ್ದಾರೆ. ಈಕೆ ಕೂಲಿ ಕೆಲಸಕ್ಕಾಗಿ ಬೇರೆ ಕಡೆಯಿಂದ ಬಂದಿದ್ದರು.

 

ಕೆಲಸದ ವೇಳೆ ಇವರು ಗೋವಿನಜೋಳ ರಾಶಿ ಯಂತ್ರಕ್ಕೆ ಹಾಕುವಾಗ ಸೀರೆ ಸಿಲುಕಿಕೊಂಡಿದ್ದರಿಂದ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಸೀರೆ ಸಿಕ್ಕಿಹಾಕಿಕೊಂಡಿದ್ದರಿಂದ ದೇಹವೂ ಯಂತ್ರಕ್ಕೆ ಸಿಲುಕಿ, ಛಿದ್ರಗೊಂಡಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

Spread the love ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ