Breaking News

ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ., ಕೋಲಾರದಿಂದ ಸ್ಪರ್ಧೆ ಮಾಡಿದರೂ ಸೋಲು ಖಚಿತ.: ಕಾರಜೋಳ

Spread the love

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ಕ್ಷೇತ್ರ ಸಿಗುವುದಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ನಡೆಸಿದರೂ ಸೋಲುವುದು ಖಚಿತ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ. ಕೋಲಾರದಿಂದ ಸ್ಪರ್ಧೆ ಮಾಡಿದರೂ ಅವರ ಸೋಲು ಖಚಿತ. ಕಾಂಗ್ರೆಸ್ ಮುಳುಗುವ ಹಡಗು.

ಕಾಂಗ್ರೆಸ್ ಪರಿಸ್ಥಿತಿ ಯಾವ ರೀತಿ ಬಂದಿದೆ ಎಂದರೆ ಸಿದ್ದರಾಮಯ್ಯ ಎಲ್ಲಿ ಸ್ಪರ್ಧೆ ಮಾಡಿದರೂ ಗೆಲುವು ಸಾಧಿಸುವುದಿಲ್ಲ.

ಚುನಾವಣೆ ಸಮೀಪಿಸುತ್ತಿದ್ದಂತೆ ಸಿದ್ದರಾಮಯ್ಯನವರು ಕ್ಷೇತ್ರ ಬದಲಾವಣೆ ಮಾಡುವುದು ಸ್ವಾಭಾವಿಕ ಎಂದು ಕುಟುಕಿದರು.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ

Spread the love ವಿಜಯಪುರ…:ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ ಅಖಂಡ ವಿಜಯಪುರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ