Breaking News

ಶಿಕ್ಷಣದಲ್ಲಿ ಕೇಸರೀಕರಣ ಇಲ್ಲ: ಬೊಮ್ಮಾಯಿ

Spread the love

ಲಬುರಗಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯದಾದ್ಯಂತ ವಿವೇಕ ಹೆಸರಿನ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕಲಬುರಗಿ ವಿಮಾನ ನಿಲ್ದಾಣದ ಬಳಿ ಇರುವ ಮಡಿಹಾಳ ಗ್ರಾಮದಲ್ಲಿ ಸೋಮವಾರ ವಿವೇಕ ಹೆಸರಿನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಕಡೆಗಳಲ್ಲಿ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಹೀಗಾಗಿ ರಾಜ್ಯ ಸರ್ಕಾರ 7601 ಶಾಲಾ ಹಾಗೂ ಕಾಲೇಜುಗಳ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರು ಧರಿಸಿದ್ದು ಖಾವಿ, ರಾಷ್ಟ್ರಧ್ವಜದಲ್ಲಿರುವುದು ಕೇಸರಿ ಬಣ್ಣ. ಹಾಗಾಗಿ ನೂತನ ಕೊಠಡಿಗಳು ಕೇಸರಿ ಬಣ್ಣದಲ್ಲಿ ಇದ್ದರೆ ತಪ್ಪೇನು? ಈ ಯೋಜನೆಯನ್ನು ವಿರೋಧಿಸುವವರು ಅಭಿವೃದ್ಧಿಯನ್ನು ಸಹಿಸದವರು ಎಂದರು.

 


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ