Breaking News

ಕಾಂತಾರಾ ವೇಷದಲ್ಲಿ ಬಂದ ತಹಶೀಲ್ದಾರ್; ತಬ್ಬಿಬ್ಬಾದ ಅಧಿಕಾರಿಗಳು

Spread the love

ಹೈದರಾಬಾದ್: ರಿಷಬ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕನ್ನಡದ ಕಾಂತಾರ ಸಿನಿಮಾ ಪರಭಾಷೆಗಳಲ್ಲೂ ಮೋಡಿ ಮಾಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡಿಗರು ಮಾತ್ರವಲ್ಲ ತೆಲುಗು, ತಮಿಳು, ಮಲಯಾಳಂ, ಬಾಲಿವುಡ್ ಸಿನಿ ರಸಿಕರು ಕೂಡ ಕಾಂತಾರಾ ಮೋಡಿಗೆ ಒಳಗಾಗಿದ್ದಾರೆ.

ಇಲ್ಲೊಬ್ಬ ತಹಶೀಲ್ದಾರ್ ಕಾಂತಾರಾ ವೇಷದಲ್ಲಿ ಆಗಮಿಸಿ ಅಧಿಕಾರಿಗಳನ್ನೇ ತಬ್ಬಿಬ್ಬುಗೊಳಿಸಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ತೆರಿಗೆ ಇಲಾಖೆಯು ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುಂಟೂರಿನ ನಾಗಾರ್ಜುನ ಯುನಿವೆರ್ಸಿಟಿಯಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ವಿಜಯನಗರಂ ಜಿಲ್ಲೆಯ ತಹಶೀಲ್ದಾರ್ ಪ್ರಸಾದ್ ರಾವ್ ಕಾಂತಾರಾ ಸಿನಿಮಾ ಗೆಟಪ್ ನಲ್ಲಿ ಆಗಮಿಸಿದ್ದಾರೆ.

ತಹಶೀಲ್ದಾರ್ ಪ್ರಸಾದ್ ರಾವ್ ವೇಷ ಕಂಡು ಅಧಿಕಾರಿಗಳು ಕಾರ್ಯಕ್ರಮದಲ್ಲಿ ನೆರೆದಿದ್ದವರು ಒಂದು ಕ್ಷಣ ತಬ್ಬಿಬ್ಬಾಗಿದ್ದಾರೆ. ಅಚ್ಚರಿಯನ್ನೂ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಾಂತಾರಾ ಚಿತ್ರದ ಡೈಲಾಗ್ ಕೂಡ ಹೇಳಿದ್ದಾರೆ. ಒಟ್ಟಾರೆ ಕನ್ನಡದ ಕಾಂತಾರಾ ದೇಶಾದ್ಯಂತ ಎಲ್ಲರನ್ನೂ ಮೋಡಿ ಮಾಡುತ್ತಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ