Breaking News

ರೋಗ ತಡೆಗೆ ನೀಡಿದ್ದ ಮಾತ್ರೆ ತಿಂದ ಮಕ್ಕಳು ಅಸ್ವಸ್ಥ!; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲ

Spread the love

ಯಾದಗಿರಿ: ಕಲುಷಿತ ನೀರು ಕುಡಿದು, ಬಿಸಿಯೂಟ ತಿಂದು ಶಾಲಾ ಮಕ್ಕಳು ಅಸ್ವಸ್ಥಗೊಂಡ ಪ್ರಕರಣಗಳು ನಡೆದಿವೆ. ಇದೀಗ ಇಲ್ಲೊಂದು ಕಡೆ ರೋಗ ತಡೆಗೆ ನೀಡಿದ್ದ ಮಾತ್ರೆಗಳನ್ನು ತಿಂದ ಮಕ್ಕಳು ಅಸ್ವಸ್ಥಗೊಂಡಂಥ ಪ್ರಕರಣವೂ ವರದಿಯಾಗಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

 

ಯಾದಗಿರಿ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಆನೆಕಾಲು ರೋಗ ತಡೆಗೆ ಮಾತ್ರೆಗಳನ್ನು ಸೇವಿಸಿ ಈ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಆನೆಕಾಲು ರೋಗ ಮುಕ್ತ ಮಾಡಲು ಇಂದು ಇವರಿಗೆಲ್ಲ ಮಾತ್ರೆಗಳನ್ನು ನುಂಗಿಸಲಾಗಿತ್ತು.

ಆದರೆ ಈ ಮಾತ್ರೆಗಳನ್ನು ನುಂಗಿದ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಲ್ಲಿ 20ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ