Breaking News

ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ತಹಶೀಲ್ದಾರ್‌ ಸೆರೆ

Spread the love

ಬೆಂಗಳೂರು: ಜಮೀನಿನ ಖಾತಾ ಬದಲಾವಣೆಗೆ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ತಹಶೀಲ್ದಾರ್‌ ಹಾಗೂ ಅವರಿಗೆ ಸಹಕರಿಸಿದ್ದ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಬಂಧಿತರು.

 

ದಾಸನಪುರದ ನಿವಾಸಿ ಕಾಂತರಾಜು ಎಂಬುವವರು ತಮ್ಮ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಖಾತಾ ಬದಲಾವಣೆ ಮಾಡಿಕೊಡಲು ಆರೋಪಿ ವರ್ಷಾ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲಂಚ ಕೊಡಲು ಇಚ್ಛಿಸದ ಕಾಮತರಾಜು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ದೂರುದಾರರಿಂದ ವರ್ಷಾ ಲಂಚ ಪಡೆಯುತ್ತಿದ್ದಾಗ ಟ್ರ್ಯಾಪ್‌ ಕಾರ್ಯಾಚರಣೆ ನಡೆಸಿ 5 ಲಕ್ಷ ರೂ. ಜಪ್ತಿ ಮಾಡಿದೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ