Breaking News

ಅರಮನೆಯಲ್ಲಿರುವ ಗುಂಬಜ್ ಮಾದರಿ ಗೋಪುರ ಕೆಡವಲು ತಾಕತ್ ಇದೆಯೇ?: ಸಿ.ಎಂ.ಇಬ್ರಾಹಿಂ ಪ್ರಶ್ನೆ

Spread the love

ಮೈಸೂರು: ಟಿಪ್ಪುಸುಲ್ತಾನ್ ಬಗ್ಗೆ ಬ್ರಿಟಿಷರು ಹಾಡಿ ಹೊಗಳಿದ್ದಾರೆ. ರಾಜಮನೆತನದವರು ಟಿಪ್ಪು ಹುತಾತ್ಮರಾದ ಮೇಲೆ ಹೇಳಿರುವ ಮಾತುಗಳು ಇತಿಹಾಸದಲ್ಲಿ ದಾಖಲಾಗಿದ್ದರೂ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಟಿಪ್ಪು ಬಗ್ಗೆ ಏನು ಅರಿಯದೆ ಸುಳ್ಳು ಹೇಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದರು.

 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪುಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಅವರ ಕಾಲದಲ್ಲಿ ನಡೆದಿರುವ ಕ್ರಾಂತಿಕಾರಕ ಯೋಜನೆಗಳು, ಅಭಿವೃದ್ಧಿ, ಹೋರಾಡಿದನ್ನು ಬ್ರಿಟಿಷರು ಹೇಳಿಕೊಂಡಿದ್ದಾರೆ. ಅದೇ ರೀತಿ ರಾಜರು ಕೊಂಡಾಡಿದ್ದಾರೆ ಎಂದರು.

ನಂಜನಗೂಡು, ಶೃಂಗೇರಿಯಲ್ಲಿ ಟಿಪ್ಪು ಸುಲ್ತಾನ್ ನೀಡಿರುವ ವಜ್ರ, ಆಯುಧಗಳಿಗೆ ಪೂಜೆ ಮಾಡಿದ ಮೇಲೆ ಮುಂದಿನ ಕೆಲಸ ಕಾರ್ಯಗಳು ನಡೆಯಲಿವೆ. ಈಗಲೂ ನಂಜನಗೂಡು, ಶ್ರೀರಂಗಪಟ್ಟಣ ದೇವಸ್ಥಾನದಲ್ಲಿ ಟಿಪ್ಪು ಕೊಟ್ಟಿರುವ ವಜ್ರಕ್ಕೆ ಪೂಜೆ ಸಲ್ಲಿಸಿಕೊಂಡು ಬರಲಾಗುತ್ತಿದೆ ಎಂಬುದನ್ನು ಅರಿಯಬೇಕು ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Spread the loveಬೆಂಗಳೂರು: ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ ಸಾರಿದೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿವೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ