Breaking News

ಇಂದಿನಿಂದ ಜೆಡಿಎಸ್‌ ಪಂಚರತ್ನ ಯಾತ್ರೆ

Spread the love

ಬೆಂಗಳೂರು: ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಳಬಾಗಿಲಿನ ಕೂಡುಮಲೆಯಿಂದ ಶುಕ್ರವಾರ ಆರಂಭ ವಾಗಲಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡರು ಎಲ್ಲ ರಥಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡುವರು.

 

ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್‌ ರಸ್ತೆಯಲ್ಲಿ ನಡೆಯುವ ಸಮಾವೇಶದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ ಸೇರಿ ಹಲವರು ಭಾಗಿಯಾಗುವರು. ರಾತ್ರಿ ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡುವರು. ನ. 1ರಂದೇ ರಥ ಯಾತ್ರೆ ಆರಂಭವಾಗಿತ್ತು. ಮಳೆಯ ಕಾರಣಕ್ಕೆ ಮುಂದೂಡ ಲಾಗಿತ್ತು


Spread the love

About Laxminews 24x7

Check Also

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ವಿರೋಧಿಸಿ ಪ್ರತಿಭಟನೆ

Spread the loveಬೆಳಗಾವಿ: ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ