Breaking News

ತಾವು ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ್ ಮುತಾಲಿಕ್

Spread the love

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.

ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಲ್ಲದೆ ಇದಕ್ಕಾಗಿ ಅವರು ಈ ಕ್ಷೇತ್ರಗಳ ಹಿಂದೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಹ ನಡೆಸಿದ್ದರು.

 

ಇದೀಗ ತಾವು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಮೋದ್ ಮುತಾಲಿಕ್ ಹೇಳಿದ್ದು, ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಸ್ಪರ್ಧೆ ನೀಡಲಿದ್ದಾರೆ. ಅಲ್ಲದೆ ಶ್ರೀರಾಮ ಸೇನೆ ವತಿಯಿಂದ ಕೆಲವೊಂದು ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸಹ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ