ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಲ್ಲಿ ಒಂದಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಈ ಯೋಜನೆ ಅಡಿಯಲ್ಲಿ ಎಲ್ಲಾ ತಾಲೂಕ ಅಧಿಕಾರಿಗಳು ಗ್ರಾಮ ವಾಸ್ತವದಲ್ಲಿ ಉಳಿದು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲೇಬೇಕು ಎಂದು ತಹಶೀಲ್ದಾರ್ ರಾಜೇಶ್ ಬುರ್ಲಿ ಅಧಿಕಾರಿಗಳಿಗೆ ಕರೆ ನೀಡಿದರು.
ಶನಿವಾರ ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದಲ್ಲಿ ತಹಶೀಲ್ದಾರ್ ರಾಜೇಶ್ ಬುರ್ಲಿ ಮತ್ತು ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಪಾಲ್ಗೊಂಡು ಇಲ್ಲಿಯ ಜನರ ಸಮಸ್ಯೆಗಳನ್ನು ಆಲಿಸಿದರು. ಸ್ಥಳದಲ್ಲಿ ಅನೇಕ ಪಿಂಚಣಿ ಯೋಜನೆಗಳು ಮಂಜೂರು ಗೊಳಿಸಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹೆಣ್ಣು ಮಗುವಿಗೆ ನೀಡುವ ಭಾಗ್ಯಲಕ್ಷ್ಮಿ ಯೋಜನೆಯ ಪಾಸ್ ಬುಕ್ ವಿತರಿಸಲಾಯಿತು. ಬೆಳಿಗ್ಗೆ ತಹಶೀಲ್ದಾರ್ ರಾಜೇಶ್ ಬುರ್ಲಿ, ಸಿಡಿಪಿಓ ಸಂಜೀವ ಕುಮಾರ್ ಸದಲಗೆ, ಬಿಇಒ ಎಂ.ಆರ್.ಮುಂಜೆ, ಶೇಡಬಾಳ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹಾಂತೇಶ ಕೊಲ್ಲಾಪುರೆ ಹಾಗೂ ಇತರ ಇಲಾಖೆ ಅಧಿಕಾರಿಗಳು ಪಟ್ಟಣ ಪಂಚಾಯತಿ ಸದಸ್ಯರು ಗ್ರಾಮಸ್ಥರು ಗ್ರಾಮದ ಮುಖ್ಯ ಮಾರ್ಗಗಳಲ್ಲಿ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸಿದರು.
ಶೇಡಬಾಳ ಸ್ಟೇಷನ್ ಗ್ರಾಮದ ಹನುಮಾನ ಮಂದಿರ ಸಭಾಭವನದಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಚರಂಡಿ, ರಸ್ತೆ ನಿರ್ಮಾಣ, ಪಿಂಚಣಿಗಳ ಬೇಡಿಕೆ ಮತ್ತು ಹನುಮಾನ ಮಂದಿರದ ಸಭಾಭವನ ಕಾಮಗಾರಿ ಪೂರ್ಣಗೊಳಿಸಲು, ಸ್ಮಶಾನಭೂಮಿ ಬೇಡಿಕೆಯನ್ನು ಗ್ರಾಮಸ್ಥರು ಮಂಡಿಸಿದರು. ಈ ವೇಳೆ ಅನೇಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿ ನಿವಾರಿಸಿದರು. ಇದೇ ವೇಳೆ ಮಾತನಾಡಿದ ತಹಶೀಲ್ದಾರ್ ಅವರು ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದರು.