Breaking News

ಶ್ರೀರಾಮುಲು ರಕ್ತ ಪವಿತ್ರ, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಾನೆ: ಸಿಎಂ ಬೊಮ್ಮಾಯಿ

Spread the love

ಳ್ಳಾರಿ: ಶ್ರೀರಾಮುಲು ರಕ್ತ ಪವಿತ್ರ ರಕ್ತ, ಹಿಂದೆ ಅವರ ಬಗ್ಗೆ ಹಗುರವಾಗಿ ಮಾತಾಡಿದ್ರಿ. ರಾಮುಲು ಅನ್ನು ಪೆದ್ದ ಅಂದ್ರು, ರಾಮುಲು ಈ ಸಮುದಾಯದ ಹೃದಯ ಸಾಮ್ರಾಟ. ರಾಮುಲುಗೆ ಪೆದ್ದ ಅಂತೀಯಾ ಸಿದ್ದರಾಮಣ್ಣಾ? ನೀನ್ ಬಾಳ ಬುದ್ಧಿವಂತ ಅಲ್ವಾ?

ನೀನು ಮುಖ್ಯಮಂತ್ರಿಯಾಗಿದ್ದೆ, ಮುಂದೊಂದು ದಿನ ಅವಕಾಶ ಬಂದ್ರೆ ಶ್ರೀರಾಮುಲು ಕೂಡ‌ ಮುಖ್ಯಮಂತ್ರಿ ಆಗ್ತಾನೆ. ಸಾಮಾಜಿಕ ನ್ಯಾಯ ಕೊಡೋದು ಬಿಜೆಪಿ ಮಾತ್ರ ಎಂದು ಕಾಂಗ್ರೆಸ್​ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಬಳ್ಳಾರಿಯಲ್ಲಿ ಭಾನುವಾರ ಎಸ್​ಟಿ ನವ ಶಕ್ತಿ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಬಿಜೆಪಿಯನ್ನ ಮತ್ತೊಮ್ಮೆ ಅಧಿಕಾರಕ್ಕೆ ತರಲು ಒಂದು ದೊಡ್ಡ ಸಮಾವೇಶ ಮಾಡಿ‌ ಮುನ್ನುಡಿ ಬರೆದಿದ್ದೀರಿ. ಇದು ಪರಿವರ್ತಾನಾ ಸಮಾವೇಶ, ಬದಲಾವಣೆಯ ಸಮಾವೇಶ. ಎಸ್ಸಿ-ಎಸ್ಟಿ ಜನರ ಬದುಕು ಬದಲಾಗಬೇಕು, ಬಡವರ ಬದುಕು ಬದಲಾಗಬೇಕು ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಹಾಕಿ‌ಕೊಟ್ಟ ಮಾರ್ಗದಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ಕರ್ನಾಟಕದಲ್ಲಿ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ವಿಸಲು ನನಗೆ ವಾಲ್ಮೀಕಿ, ಬುದ್ಧ, ಬಸವಣ್ಣ ಸ್ಫೂರ್ತಿ. ಕೇಂದ್ರದಲ್ಲಿ 3% ಇದ್ದ ಮೀಸಲಾತಿಯನ್ನ 7% ಮಾಡಿದ್ದು ಮೋದಿ ಅವರು. ಕಾಂಗ್ರೆಸ್​ನವರು 60 ವರ್ಷದಲ್ಲಿ ಏನು ಮಾಡಿದ್ರು? ಸಿದ್ದರಾಮಯ್ಯನವರೇ ಇಲ್ಲಿ ಬಂದು ನೋಡಪ್ಪಾ.ಎಸ್ಸಿ-ಎಸ್ಟಿ ನಮ್ ಜೊತೆ ಇದ್ದಾರೆ. ಇಲ್ಲಿದೆ ಬಾ ಅಹಿಂದಾ, ನಮ್ಮ ಜೊತೆ ಇದೆ ನೋಡು. ನಿಮ್ಮ‌ ನಾಟಕ ಇನ್ಮುಂದೆ ನಡೆಯಲ್ಲ ಎಂದರು. ಸಣ್ಣ ಮೈದಾನದಲ್ಲಿ ಭಾರತ್ ಜೋಡೋ ಸಭೆ ಮಾಡಿ ಬೃಹತ್ ಸುನಾಮಿ ಅಂದ್ರು. ಈಗ ಬಂದು ನೋಡಿ ಸುನಾಮಿ ಬಂದಿದೆ ಎಂದು ಕಾಂಗ್ರೆಸ್​ ಅನ್ನು ಮಾತಿನಲ್ಲೇ ಸಿಎಂ ಕೆಣಕಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ