Home / ರಾಜಕೀಯ / ಬೊಮ್ಮಾಯಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬಂದರೆ ಸ್ವಾಗತ: ಸಿ.ಎಂ.ಇಬ್ರಾಹಿಂ

ಬೊಮ್ಮಾಯಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬಂದರೆ ಸ್ವಾಗತ: ಸಿ.ಎಂ.ಇಬ್ರಾಹಿಂ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬಂದರೆ ಅವರನ್ನು ಆದರದಿಂದ ಸ್ವಾಗತಿಸುತ್ತೇನೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಈದ್ಗಾ ಮೈದಾನ ವಿಚಾರವಾಗಿ ನಾನು ಮತ್ತು ಬಸವರಾಜ ಬೊಮ್ಮಾಯಿ ಅವರು ಸೂಕ್ತ ನಿರ್ಧಾರ ಕೈಗೊಂಡಿದ್ದೇವು, ಇದೀಗ ಪಾಪ ಬೊಮ್ಮಾಯಿ ಅವರು ಬಿಜೆಪಿ ಸೇರಿ ತಬ್ಬಲಿ ಆಗಿದ್ದಾರೆ ಎಂದರು.

ಸದ್ಯ ಬಸವರಾಜ ಬೊಮ್ಮಾಯಿ ಅವರ ಸ್ಥಿತಿ 2ಎ, ಎಸ್ ಸಿ ಎಸ್ ಟಿ, ಹಾಗೂ ಕುರುಬ ಸಮಾಜದ ಮೀಸಲಾತಿ ವಿಚಾರದ ನಡುವೆ ಸಿಲುಕಿ ಹಾಕಿಕೊಂಡಿದ್ದಾರೆ. ಒಂದು ಕಡೆಗೆ ಕೇಶವ ಕೃಪ, ಇನ್ನೊಂದೆಡೆ ಬಸವ ಕೃಪದಿಂದ ಒದ್ದಾಡುತ್ತಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು.

ಜೆಡಿಎಸ್ ಶಿಕ್ಷಣ, ಆರೋಗ್ಯ, ನೀರಾವರಿಯ ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಪಂಚರತ್ನ ಯಾತ್ರೆ ನಡೆಸುತ್ತಿದೆ. ಅದರಲ್ಲಿ ಮುಖ್ಯವಾಗಿ ಮಹದಾಯಿ, ಕೃಷ್ಣ, ಮಲಪ್ರಭಾ, ಘಟಪ್ರಭಾ ನದಿಯ ಒಂದಿಚ್ಚು ನೀರನ್ನು ಸಮುದ್ರಕ್ಕೆ ಸೇರಲು ಬಿಡುವುದಿಲ್ಲ. ಬದಲಾಗಿ ರೈತರ ಕೃಷಿಗೆ ಇಲ್ಲವೇ ಜನರಿಗೆ ಕುಡಿಯುವ ನೀಡುವ ಉದ್ದೇಶ ಹೊಂದಿದ್ದೇವೆ. ಗ್ರಾಮ ಮಟ್ಟದಲ್ಲಿ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ, ಕೃಷಿಯಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಕೆ ಮಾಡಿ ಹೆಚ್ಚು ಉತ್ಪನ್ನ ಬೆಳೆಯುವ ಯೋಜನೆ ತರಲಿದ್ದೇವೆ ಎಂದರು.

ಸದ್ಯ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಈ ಹಿಂದೆ ದಿವಂಗತ ನಂಜುಂಡಪ್ಪ ತಯಾರಿಸಿದ ವರದಿಯಂತೆ ರೈತರಿಗೆ ಬೆಂಬಲ ಬೆಲೆ ಕೊಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಸಾರಿಗೆಯಲ್ಲಿ ಯಾವುದೇ ನಿಯಂತ್ರಣವಿಲ್ಲ. ಹೀಗಾಗಿ ಸಾರಿಗೆ ನಿಗಮದಿಂದ ಸರ್ಕಾರಕ್ಕೆ ಯಾವುದೇ ಲಾಭವಿಲ್ಲದಂತೆ ಆಗಿದೆ. ಆದರೆ ನಮ್ಮ ಸರ್ಕಾರ ಬಂದಲ್ಲಿ ಸಾರಿಗೆಯಿಂದಲೇ ಶೇ.20 ರಷ್ಟು ಲಾಭ ಮಾಡಿ ಬಜೆಟ್ ಗೆ ಬಳಕೆ ಮಾಡಿಕೊಳ್ಳುತ್ತೇವೆ‌‌. ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಜನರು ರೋಸಿ ಹೋಗಿದ್ದು ಬರುವ ಚುನಾವಣೆಯಲ್ಲಿ ಕನಿಷ್ಠ 123 ಸೀಟ್ ಗಳಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸವಿದೆ. ಅದರಲ್ಲಿ ಹಳೇಮೈಸೂರು ಭಾಗದಲ್ಲಿ 40 ಸ್ಥಾನ ಗೆಲ್ಲಲಿದ್ದೇವೆ‌ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Spread the love ಬೇಸಗೆ ಝಳದಲ್ಲಿ ಬೇಯುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಕಾವೂ ಹೆಚ್ಚಿದ್ದು, ರಾಜಧಾನಿಯ ಗದ್ದುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ