Breaking News
Home / ಜಿಲ್ಲೆ / ಬೆಳಗಾವಿ / ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣ

ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣ

Spread the love

ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದ ಆನೆಬಾಯಿಕೋಡಿಯಲ್ಲಿ ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣವಾಗಿದೆ‌. ಅ

ಲಾಲಪುರ- ರಾಯಬಾಗ ರಸ್ತೆಯಲ್ಲಿರುವ ಆನೆಬಾಯಿ ಕೋಡಿಯಲ್ಲಿ ವಿದ್ಯುತ್ ಕಂಬ್ ಸಮೀಪದ ಮತ್ತೊಂದು ವಿದ್ಯುತ್ ಕಂಬಕ್ಕೆ ತಾಗುತ್ತಿದೆ. ಇದರಿಂದ ಜನರು ಭಯಭೀತಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಯಾರೂ ಇತ್ತ ಕಡೆ ಗಮನಹರಿಸುತ್ತಿಲ್ಲ ಎಂದು ಜನರು ಗಂಭೀರ ಆರೋಪ ಮಾಡುತ್ತಿದ್ದಾರೆ.

ವಿದ್ಯುತ್ ಕಂಬ ಮತ್ತೊಂದು ಹೈಓಲ್ಟೇಜ್ ಕಂಬಕ್ಕೆ ತಗುಲಿದರೆ ಬಾರೀ ಅನಾಹುತವೇ ಸಂಭವಿಸುತ್ತದೆ. ಅಷ್ಟೇ ಅಲ್ಲದೇ ಇಲ್ಲಿರುವ ರಸ್ತೆ ಮೇಲೆ ಹಾಯ್ದಿರುವ ವಿದ್ಯುತ್ ತಂತಿಗಳನ್ನು ಬಿಗಿಯಾಗಿ ಕಟ್ಟಲು ತಿಳಿಸಿದರೂ ಸಿಬ್ಬಂದಿಗಳು ಕಟ್ಟಿಲ್ಲ ಇದರಿಂದ ಕಳೆದ ಹಲವು ದಿನಗಳ ಹಿಂದಷ್ಟೆ ಟ್ರ್ಯಾಕ್ಟರ್ ಡಬ್ಬಿಗೆ ಬೆಂಕಿ ತಗುಲಿ ರೈತನಿಗೆ ಸಾಕಷ್ಟು ನಷ್ಟವಾಗಿದೆ. ಆಗಲೂ ಕೂಡ ಹೆಸ್ಕಾಂ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಆದರೆ ಅಧಿಕಾರಿಗಳು ಇದ್ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ


Spread the love

About Laxminews 24x7

Check Also

ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ದ ವಿಡಂಬನಾತ್ಮಕ ಪೋಸ್ಟರ್​​ವೊಂದನ್ನು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾ

Spread the love ಬೆಂಗಳೂರು: ಕಾವೇರಿ ವಿವಾದ ಹಿನ್ನೆಲೆ ಪ್ರಧಾನಿ ಮೋದಿ ನಡೆದುಕೊಂಡು ಹೋಗುತ್ತಿರುವ ಪಯಣದ ದಿಕ್ಕಿನ ವಿಡಂಬನಾತ್ಮಕ ಪೋಸ್ಟರ್ ಪೋಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ