Breaking News

ಅದ್ದೂರಿ ರಾಜ್ಯೋತ್ಸವಕ್ಕೆ ಹುಕ್ಕೇರಿ ನಗರದಲ್ಲಿಚಂದ್ರಶೇಖರ ಶ್ರೀಗಳಿಂದ ಚಾಲನೆ.

Spread the love

ಹುಕ್ಕೇರಿ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ವನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಮತ್ತು ಕ್ಯಾರಗುಡ್ಡದ ಅಭಿನವ ಮಂಜುನಾಥ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಅದ್ದೂರಿ ಮೇರವಣೆಗೆ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಪವನ ಕತ್ತಿ ಮತ್ತು ಪೃಥ್ವಿ ಕತ್ತಿ ದಿವಂಗತ ಉಮೇಶ ಕತ್ತಿ ಮತ್ತು ಪುನಿತ ರಾಜಕುಮಾರ ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಿದರು.

ಮಾದ್ಯಮಗಳೊಂದಿಗೆ ಮಾತನಾಡಿದ ಶ್ರೀ ಗಳು ಗಡಿಭಾಗದ ಹುಕ್ಕೇರಿ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ವನ್ನು ಎಲ್ಲಾ ಧರ್ಮಿಯರು ಉತ್ಸಾಹದಿಂದ ತಮ್ಮ ಮನೆಯ ಹಬ್ಬವನ್ನಾಗಿ ಆಚರಿಸುತ್ತಿದ್ದಾರೆ, ರಾಜ್ಯ ಸರ್ಕಾರವು ಸಹ ರಾಜ್ಯೋತ್ಸವ ನಮಿತಿಗೆ ಸ್ಪಂದನೆ ನೀಡಬೇಕು ಎಂದರು.

ಅದೇ ರೀತಿ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಪವನ ಕತ್ತಿ, ಪುರಸಭೆ ಸದಸ್ಯರಾದ ಮಹಾವೀರ ನಿಲಜಗಿ, ಸದಾನಂದ ಕರೆಪ್ಪಗೋಳ, ರಾಜು ಮುನ್ನೋಳ್ಳಿ ಮಾದ್ಯಮಗಳೊಂದಿಗೆ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಉತ್ಸಾಹಿ ಸಮಿತಿ ಸದಸ್ಯರು, ಪುರಸಭೆ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕನ್ನಡಾಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನಮ್ಮ ನಾಡು ನುಡಿ ಸಂಸ್ಕೃತಿ ಬಿಂಬಿಸುವ ರೂಪಕಗಳು, ವಾದ್ಯಗಳು ಮೇರವಣೆಗೆಯ ಆಕರ್ಷಣೆಯ ವಾಗಿದ್ದವು.
ಮಧ್ಯಾಹ್ನ ಕೋರ್ಟ ಸರ್ಕಲ್ ಸೇರಿದ ಮೇರವಣೆಗೆವು ಸಭೆಯಾಗಿ ಮಾರ್ಪಟ್ಟಿತು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ