Breaking News

ಅನಾರೋಗ್ಯ.ಬಹುಭಾಷಾ ನಟ ಕಮಲಹಾಸನ್ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲು

Spread the love

ಚೆನ್ನೈ: ಬಹುಭಾಷಾ ನಟ, ಉಳಗನಾಯಕನ್ ಕಮಲ್ ಹಾಸನ್ ಅನಾರೋಗ್ಯದಿಂದಾಗಿ ಬುಧವಾರ (ನವೆಂಬರ್ 23) ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್(ಎಸ್ ಆರ್ ಎಂಸಿ)ಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.

 

ಜ್ವರದಿಂದ ಬಳಲುತ್ತಿರುವ ಕಮಲ್ ಹಾಸನ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಕಮಲ್ ಹಾಸನ್ ಅವರು ಇಂದು (ನ.24) ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ಹೇಳಿವೆ.

ಇತ್ತೀಚೆಗೆ ಕಮಲ್ ಹಾಸನ್ ತಮ್ಮ ಮಾರ್ಗದರ್ಶಕ, ದಂತಕಥೆ ನಿರ್ದೇಶಕ ಕೆ.ವಿಶ್ವನಾಥ್ ಅವರನ್ನು ಹೈದರಾಬಾದ್ ನಲ್ಲಿ ಭೇಟಿಯಾಗಿದ್ದರು. ಇಬ್ಬರ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಹೈದರಾಬಾದ್ ನಿಂದ ಮರಳಿದ್ದ ಕಮಲ್ ಹಾಸನ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ನಂತರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕಮಲ್ ಹಾಸನ್ ಅವರು ತಮಿಳಿನ ಬಿಗ್ ಬಾಸ್ ಸೀಸನ್ 6ರ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ