Breaking News

ಲಂಚ ಪಡೆಯುತ್ತಿದ್ದ ಕಿತ್ತೂರು ತಹಶೀಲ್ದಾರ ಲೋಕಾಯುಕ್ತ ಬಲೆಗೆ

Spread the love

ಬೆಳಗಾವಿ: ತಂದೆ ಹೆಸರಿನಲ್ಲಿದ್ದ ಜಮೀನನ್ನು ಮಗನ ಹೆಸರಿಗೆ ಬದಲಾವಣೆ ಮಾಡಲು ಲಂಚ ಪಡೆಯುತ್ತಿದ್ದ ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿ ಭೂ ಸುಧಾರಣಾ ವಿಷಯಗಳ ನಿರ್ವಾಹಕ ಪ್ರಸನ್ನ ಜಿ.

ಎಂಬವರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ ಲಂಚ ಸಮೇತ ಖೆಡ್ಡಾಕ್ಕೆ ಬೀಳಿಸಿದ್ದಾರೆ.

ಕಿತ್ತೂರು ತಾಲೂಕಿನ ಖೋದನಾಪುರ ಗ್ರಾಮದ ರಾಜೇಂದ್ರ ಬಾಪುಸಾಹೇಬ ಇನಾಮದಾರ ಎಂಬವರ ಪಹಣಿ ಪತ್ರಿಕೆಯಲ್ಲಿ ಖಾತಾ ಬದಲಾವಣೆ ಮಾಡಲು 5 ಲಕ್ಷ ರೂ. ಲಂಚ ಕಿತ್ತೂರು ತಹಶೀಲ್ದಾರ ಸೋಮಲಿಂಗ ಹಲಗಿ ಬೇಡಿಕೆ ಇಟ್ಟಿದ್ದರು. 10 ಎಕರೆ ಜಮೀನನ್ನು ನೋಂದ ಮಾಡಿಕೊಡಲು ಹಾಗೂ ಅದರ ಶೂರಿಟಿಗಾಗಿ 20 ಲಕ್ಷ ರೂ. ಮೊತ್ತದ ಖಾಲಿ ಚೆಕ್ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ಶುಕ್ರವಾರ ತಹಶೀಲ್ದಾರರು ಹಾಗೂ ನೂರು ಅಧಿಕಾರಿ 2 ಲಕ್ಷ ರೂ ಲಂಚದ ಹಣ ಹಾಗೂ ಖಾಲಿ ಚೆಕ್ ಪಡೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ