ಚಿತ್ರದುರ್ಗ: ಬೈಕಿಗೆ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೈನಡು ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಕೈನಡು ಗ್ರಾಮದ ಉಜ್ಜೀರಪ್ಪ (38), ರವಿಕುಮಾರ್ (29), ಗಿರೀಶ್ (23) ಮೃತಪಟಟ್ವರು.
ನಿನ್ನೆ ತಡರಾತ್ರಿ ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.