Breaking News

ಸಿದ್ದು-ಡಿಕೆಶಿ ಮಾತ್ರ ಅಲ್ಲ ಇನ್ನೂ 25 ಜನ ಸಿಎಂ ಸ್ಥಾನಕ್ಕೆ ಅರ್ಹ: ಎಂ.ಬಿ.ಪಾಟೀಲ್

Spread the love

ವಿಜಯಪುರ: ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಶಕ್ತಿ ಬಂದ ಮೇಲೆ ಮುಖ್ಯಮಂತ್ರಿ ಯಾರಾಗಬೇಕು ಎಂದು ಶಾಸಕಾಂಗ ಸಭೆ ಹಾಗೂ ಹೈಕಮಾಂಡ್‌ ನಿರ್ಧರಿಸಲಿದೆ.

ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಅಷ್ಟೇ ಅಲ್ಲ ಆರ್‌.ವಿ.ದೇಶಪಾಂಡೆ, ಎಚ್‌.ಕೆ.ಪಾಟೀಲ, ಕೆ.ಎಚ್‌.ಮುನಿಯಪ್ಪ, ಪರಮೇಶ್ವರ, ರಾಮಲಿಂಗಾರೆಡ್ಡಿ ಸೇರಿದಂತೆ 25ಕ್ಕೂ ಹೆಚ್ಚು ಹಿರಿಯರು ಸಿಎಂ ಸ್ಥಾನಕ್ಕೇರುವ ಅರ್ಹತೆ ಹೊಂದಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು.

 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸರ್ಕಾರ ನಡೆಸಲು 113 ಶಾಸಕರ ಬಲ ಬೇಕು. ಕಾಂಗ್ರೆಸ್‌ ಈ ಬಾರಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ. ಬಳಿಕ ಶಾಸಕಾಂಗ ಸಭೆಯಲ್ಲಿ ಮೂಡುವ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ವೀಕ್ಷಕರು ನೀಡುವ ವರದಿ ಆಧರಿಸಿ ಹೈಕಮಾಂಡ್‌ ಸಿಎಂ ಅಭ್ಯರ್ಥಿ ಘೋಷಿಸಲಿದೆ. ಇದು ಕಾಂಗ್ರೆಸ್‌ ನೀತಿ. ರಾಜ್ಯದಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮೀಸಲಿರುವ ಕ್ಷೇತ್ರಗಳ ಹೊರತಾಗಿ ಯಾವುದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಲು ಅರ್ಹರಿದ್ದಾರೆ ಎಂದರು.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಿದ್ದರಾಮಯ್ಯ ಬಗ್ಗೆ ಸಿದ್ರಾಮುಲ್ಲಾ ಖಾನ್‌ ಎಂದು ಹಗುರವಾಗಿ ಮಾತನಾಡಿರುವ ಕ್ರಮ ಖಂಡನಾರ್ಹ. ಹಾಲುಮತ ಸಮಾಜದವರು, ಅಲ್ಪಸಂಖ್ಯಾತರು ಗಂಭೀರವಾಗಿ ಪರಿಗಣಿಸಿ ಸಿಡಿದೆದ್ದರೆ ಪರಿಸ್ಥಿತಿ ಏನಾದೀತೆಂಬ ಎಚ್ಚರಿಕೆ ಇರಬೇಕು. ಸಿ.ಟಿ.ರವಿ ಕೀಳು ರಾಜಕೀಯ ಬಿಡಬೇಕು. ಪ್ರಧಾನಿ ಮೋದಿ, ಮೋಹನ ಭಾಗವತ್‌ ಅವರೇ ಹಿಂದು, ಹಿಂದುತ್ವ ಎಂಬುದು ಭಾರತೀಯರ ಜೀವನ ಶೈಲಿ ಎಂದಿದ್ದನ್ನೇ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುಮ್ಮನೆ ವಿವಾದ ಸೃಷ್ಟಿಸಿದ್ದರಿಂದ ಸೌಜನ್ಯಕ್ಕೆ ಕ್ಷಮೆಯಾಚಿಸಿದ್ದರೂ ಚರ್ಚೆಗೆ ಬರಲಿ ಎಂದು ಸವಾಲು ಹಾಕಿರುವುದು ಸರಿಯಲ್ಲ ಎಂದರು.


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ