Breaking News

ಕೆಎಸ್‌ಆರ್‌ಟಿಸಿ: 1,013 ನೌಕರರ ವರ್ಗಾವಣೆ

Spread the love

ಬೆಂಗಳೂರು: ಅಂತರ್‌ ನಿಗಮ ವರ್ಗಾವಣೆಗೆ ಕೋರಿ ಅರ್ಜಿ ಸಲ್ಲಿಸಿದ್ದ 4,665 ಸಾರಿಗೆ ನಿಗಮಗಳ ನೌಕರರ ಪೈಕಿ 1,013 ನೌಕರರನ್ನು ವರ್ಗಾವಣೆ ಮಾಡಿ ಬುಧವಾರ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.

ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ 4ರ ನೌಕರರ ಅಂತರ ನಿಗಮ ವರ್ಗಾವಣೆ ಮಾಡಲಾಗಿದ್ದು, ಆದೇಶ ಪತ್ರಗಳನ್ನು ನಿಗಮದ ವೆಬ್‌ಸೈಟ್‌ https://ksrtc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಸೇವಾ ಜ್ಯೇಷ್ಠತೆ ಮತ್ತು ಹಾಲಿ ಹು¨ªೆಗಳಿಗೆ ಅನುಗುಣವಾಗಿ ಕೌನ್ಸೆಲಿಂಗ್‌ ಮೂಲಕ ವಿಭಾಗಗಳಿಗೆ ಹಂಚಿಕೆ ಮಾಡಲಾಗುವುದು.

ಈ ಸಂಬಂಧದ ಕೌನ್ಸೆಲಿಂಗ್‌ ಡಿ. 5ರಿಂದ 15ರ ತನಕ ವೆಬ್‌ಸೈಟ್‌ನಲ್ಲಿ (ksrtc.org/counseling)ನಡೆಸಲಾಗುವುದು. ಈ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌ನಲ್ಲಿ ನಡೆಯುವುದರಿಂದ ಲಿಖಿತ ಅರ್ಜಿಗಗಳ ಆಧಾರದ ಮೇಲೆ ಯಾವುದೇ ಕ್ರಮ ವಹಿಸುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬಂದಿ ಮತ್ತು ಜಾಗೃತ) ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ