Breaking News

ಚುನಾವಣೆ ಬರುತ್ತಿದ್ದಂತೆ ಕಾಂಗ್ರೆಸ್ ಟೂಲ್‌ಕಿಟ್ ಸುದ್ದಿಗಳು ಆರಂಭವಾಗಿವೆ: ಬಿಜೆಪಿ

Spread the love

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ನ ಟೂಲ್‌ಕಿಟ್ ಸುದ್ದಿಗಳು ಆರಂಭವಾಗಿವೆ. ಅದರಲ್ಲಿ ಒಂದು ‘ಪ್ರತ್ಯೇಕ ಮುಸ್ಲಿಂ ಕಾಲೇಜು’ ಸುದ್ದಿ ಎಂದು ಬಿಜೆಪಿ ಆರೋಪಿಸಿದೆ.

ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್‌ಗೆ ಕೆಲಸವೂ ಇಲ್ಲ’ ಎಂದು ಕಿಡಿಕಾರಿದೆ.

Image

 

ಪ್ರತ್ಯೇಕ ಕಾಲೇಜು ತೆರೆಯುವ ಬಗ್ಗೆ ಚರ್ಚೆಯಾಗಿಲ್ಲ: ಸಿಎಂ ಬೊಮ್ಮಾಯಿ
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು, ಹಿಜಾಬ್ ಧರಿಸಲು ಅನುಮತಿ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ‌ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು’ ಎಂದಿದ್ದಾರೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ