Breaking News

ವಿಷ್ಣು ಅಭಿಮಾನಿ ಮೃತದೇಹ ಸಾಗಿಸುವುದಕ್ಕೂ ಲಂಚ ಕೇಳಿದ ಆಸ್ಪತ್ರೆಯ ಸಿಬ್ಬಂದಿ’

Spread the love

ದಾವಣಗೆರೆ: ಕೋವಿಡ್ ಹಾಗೂ ನಾನ್ ಕೋವಿಡ್ ವ್ಯಕ್ತಿಗಳು ಆಸ್ಪತ್ರೆಯಲ್ಲಿ ಮೃತರಾದರೆ, ಅವರ ಮೃತದೇಹವನ್ನು ನೀಡಲು ಸಂಬಂಧಿಕರಿಂದ ಹಣದ ಬೇಡಿಕೆ ಇಟ್ಟಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತದೇಹವನ್ನು ನೀಡಲು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆಲವು ಖಾಸಗಿ ವ್ಯಕ್ತಿಗಳು, ಕುಟುಂಬಸ್ಥರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜೊತೆಗೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಮೃತರಾದರೆ ಅಥವಾ ಮನೆಯಲ್ಲಿ ಮೃತರಾದರೆ ಅವರ ಮೃತದೇಹವನ್ನು ಮನೆಯಿಂದ ಆಸ್ಪತ್ರೆಯ ಶವಾಗಾರಕ್ಕೆ ಹಾಗೂ ಶವಗಾರದಿಂದ ಸ್ಮಶಾನಕ್ಕೆ ಸಾಗಿಸಲು ನಾಲ್ಕರಿಂದ ಐದು ಸಾವಿರ ರೂಪಾಯಿಗಳನ್ನು ಲಂಚ ಪಡೆಯುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಅಲ್ಲದೆ ನಿನ್ನೆ ನೇಣಿಗೆ ಶರಣಾದ ನಟ ವಿಷ್ಣುವರ್ಧನ್ ಅಭಿಮಾನಿ ಲೋಕೇಶ್ ಅವರ ಮೃತದೇಹ ಸಾಗಿಸಲು ಸಹ ಆಸ್ಪತ್ರೆಯ ಸಿಬ್ಬಂದಿ ಹಣ ಕೇಳಿದ್ದರು ಎಂದು ಲೋಕೇಶ್ ಸಂಬಂಧಿಕರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ