Breaking News

ಬೆಳಗಾವಿಗೆ ಹೋಗಿಯೇ ತೀರುತ್ತೇವೆ: ಸಿಎಂಗೆ ‘ಮಹಾ’ಸಚಿವರ ಸವಾಲ

Spread the love

ಬೆಳಗಾವಿ: ‘ಡಿಸೆಂಬರ್‌ 6ಕ್ಕೆ ಬೆಳಗಾವಿಗೆ ಹೋಗಿಯೇ ತೀರುತ್ತೇವೆ. ಕರ್ನಾಟಕದ ಮುಖ್ಯಮಂತ್ರಿ ಹೇಳಿಕೆಗೆ ಪ್ರತ್ಯುತ್ತರ ನೀಡಲೆಂದೇ ಹೋಗುತ್ತೇವೆ. ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜ್ ದೇಸಾಯಿ ಸವಾಲು ಹಾಕಿದ್ದಾರೆ.

ಮುಂಬೈನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ ಪಾಟೀಲ, ‘ಗಡಿ ವಿವಾದದ ಕಾರಣ ತ್ವೇಷಮಯ ವಾತಾವರಣವಿದೆ. ಈಗ ಬರಬೇಡಿ ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮಹಾರಾಷ್ಟ್ರ
ಸರ್ಕಾರಕ್ಕೆ ಪತ್ರ ರವಾನಿಸಿದ್ದಾರೆ. ನಾನು ಯಾರಿಗೂ ಹೆದರುವವನಲ್ಲ. ಅಲ್ಲಿಗೆ ಹೋಗಿಯೇ ಉತ್ತರ ಕೊಡುತ್ತೇನೆ. ಛತ್ರಪತಿ ಶಿವಾಜಿ ಹಾಗೂ ಡಾ.ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಯೇ ತೀರುತ್ತೇನೆ’ ಎಂದು ಘೋಷಿಸಿದ್ದಾರೆ.

ಸ್ಥಳದಲ್ಲಿದ್ದ ರಾಜ್ಯಸಭೆ ಸದಸ್ಯ ಸಂಜಯ್‌ ರಾವುತ್‌ ಅವರೂ, ‘ಗಡಿ ಉಸ್ತುವಾರಿ ಸಚಿವರು ಬೆಳಗಾವಿಗೆ ಹೋಗಲೇಬೇಕು. ಅವರಿಗೆ ಆಗದಿದ್ದರೆ ನಾನೇ ಹೋಗಿ ತೋರಿಸುತ್ತೇನೆ’ ಎಂದಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ