Breaking News
Home / ಜಿಲ್ಲೆ / ಬಿಜಾಪುರ / ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

Spread the love

ವಿಜಯಪುರ: ಮೂಲ ಸೌಕರ್ಯಗಳಿಂದ ವಂಚಿತರಾದ ಮಹಾರಾಷ್ಟ್ರದ ಗಡಿನಾಡು ಕನ್ನಡಿಗರು ಕರ್ನಾಟಕಕ್ಕೆ ಸೇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಕ್ಕೆ ಉರಿದು ಬೀಳುತ್ತಿರುವ ಮಹಾರಾಷ್ಟ್ರ ಸರಕಾರ, ಕನ್ನಡದ ಗ್ರಾಮಗಳಿಗೆ ಪಡಿತರ ಚೀಟಿ ರದ್ದು ಮಾಡುವ ಬೆದರಿಕೆ ಹಾಕುತ್ತಿದೆ.

ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಗಡಿನಾಡು ಕನ್ನಡಿಗರನ್ನು ನಿರ್ಲಕ್ಷಿಸಿದ್ದಕ್ಕೆ ಮಹಾರಾಷ್ಟ್ರ ದ ವಿರುದ್ಧ ಸಹಜವಾಗಿಯೇ ತಿರುಗಿ ಬಿದ್ದಿದ್ದಾರೆ.

ಕರ್ನಾಟಕದ ನೆಲ, ಜಲ, ಭಾಷೆಯಂಥ ಆಸ್ಮಿತೆ ವಿಷಯ ಬಂದಾಗ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸಹಿತ ಎಲ್ಲ ಪಕ್ಷಗಳೂ ಕನ್ನಡದ ಪರವಾಗಿವೆ. ಪ್ರಸ್ತುತ ನಾವು ರಾಜ್ಯ ಸರಕಾರದ ಪರವಾಗಿಯೇ ನಿಲ್ಲುತ್ತೇವೆ ಎಂದರು.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ