Breaking News
Home / ಜಿಲ್ಲೆ / ಬೆಂಗಳೂರಿನಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

Spread the love

ಬೆಂಗಳೂರು ಮಾ. 32 : ಬೇಸಿಗೆ ಸಮಯದಲ್ಲಿ ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಲೇ ಕರೋನಾ ಮಹಾಮಾರಿ ರಾಜ್ಯದೆಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಇದರ ನಡುವೆಯೇ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರಿತಪಿಸುವಂತಾಗಿದೆ.

ಬೆಳಗ್ಗೆಯಿಂದಲೇ ಬಿಸಿಲ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಹಲವಾರು ಬದಲಾವಣೆಯಾಗಿ ಈ ರೀತಿ ಧಾರಾಕಾರ ಮಳೆ ಸುರಿಯುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ನಿನ್ನೆಯಷ್ಟೇ ರಾಜ್ಯಾದ್ಯಂತ ನಡೆದಂತಹ ಜನತಾ ಕರ್ಫ್ಯೂ ನಡುವೆ ಜನರು ಮನೆಯಲ್ಲಿ ಇದ್ದರು. ಇಡೀ ರಾಜ್ಯ ಸ್ತಬ್ಧಗೊಂಡಿತ್ತು ಆದರೆ ಇಂದೂ ಕೂಡ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಿರುವುದರಿಂದ ಬೆಂಗಳೂರಿಗೆ ಬರುವಂತಹ ವಾಹನಗಳನ್ನು ತಡೆಯಲಾಗುತ್ತಿತ್ತು. ಈ ನಡುವೆ ಬೆಂಗಳೂರಿನಲ್ಲಿ ಅಕಾಲಿಕ ಮಳೆಗೆ ಜನರಿಗೆ ಬೇಸಿಗೆಯ ಬಿಸಿ ತಣಿಸಿದೆ. ಜೊತೆಗೆ ಆತಂಕವನ್ನೂ ಕೂಡ ಹೆಚ್ಚಿಸಿದೆ.


Spread the love

About Laxminews 24x7

Check Also

ಕರ್ನಾಟಕ ವಿಧಾನಸಭಾ ಚುನಾವಣೆ : ಮೇ. 10 ರಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

Spread the love ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ( Karnataka Assembly Election 2023 ) ದಿನಾಂಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ