Breaking News

ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ; ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ; ಶಾಸಕ ಯತ್ನಾಳ್ ಆರೋಪ

Spread the love

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ.

ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ ಮಾಡುವುದಾಗಿ ಹೇಳಿ 10 ಕೋಟಿ ಪಡೆದುಕೊಂಡಿದ್ದಾರೆ. ವಚನಾನಂದ ಶ್ರೀಗಳ ಮುಖವಾಡ ಶೀಘ್ರವೇ ಬಯಲಾಗಲಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ