Breaking News

ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ; ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ; ಶಾಸಕ ಯತ್ನಾಳ್ ಆರೋಪ

Spread the love

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ.

ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ ಮಾಡುವುದಾಗಿ ಹೇಳಿ 10 ಕೋಟಿ ಪಡೆದುಕೊಂಡಿದ್ದಾರೆ. ವಚನಾನಂದ ಶ್ರೀಗಳ ಮುಖವಾಡ ಶೀಘ್ರವೇ ಬಯಲಾಗಲಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ