Breaking News
Home / ರಾಜಕೀಯ / ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 8 ರಂದು ದಲಿತ ಸಮುದಾಯಗಳ ಐಕ್ಯತಾ ಸಮಾವೇಶ!

ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 8 ರಂದು ದಲಿತ ಸಮುದಾಯಗಳ ಐಕ್ಯತಾ ಸಮಾವೇಶ!

Spread the love

ಕಾಂಗ್ರೆಸ್ ಪಕ್ಷದ ವತಿಯಿಂದ ಚಿತ್ರದುರ್ಗದಲ್ಲಿ ಜನವರಿ 8 2023 ರಂದು ಹಮ್ಮಿಕೊಳ್ಳಲಾದ ದಲಿತ ಸಮುದಾಯಗಳ ಐಕ್ಯತಾ ಸಮಾವೇಶದ ಬಗ್ಗೆ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮಾಹಿತಿ ನೀಡಿದರು.

ಮೀಸಲಾತಿ ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು. ಇದರ ರಾಜಕೀಯ ಲಾಭಪಡೆಯಲು ಬಿಜೆಪಿ ಮುಂದಾಗಿದೆ.ಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯವನ್ನು ಬಿಜೆಪಿ ಒಡೆದಾಳಲು ಹೊರಟಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ.

ಮೀಸಲಾತಿಗೆ ಕೇಂದ್ರ ಸರ್ಕಾರ ಕಾನೂನಿನ ಚೌಕಟ್ಟು ನೀಡಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯ ನಂತರವು ಕಾಂಗ್ರೆಸ್ ದಲಿತರೊಂದಿಗೆ ಇದೆ.

ಹೀಗಾಗಿ ಮತ್ತೆ ದಲಿತರಿಗೆ ಭರವಸೆ ನೀಡುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಲಾಗಿದ್ದು ಸಮಾವೇಶದಲ್ಲಿ ದಲಿತರ ಹಲವು ಸಮಸ್ಯೆಗಳನ್ನು ಚರ್ಚಿಸಲಾಗುವುದು ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ