Breaking News

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ: ಸಂಜಯ್ ರಾವುತ್

Spread the love

ಮುಂಬೈ: ಬೆಳಗಾವಿ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿವಸೇನಾ, ಬೆಳಗಾವಿಯ ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಹೇಳಿದೆ.

‘ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ’ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

 

ಶರದ್ ಪವಾರ್ ನೇತೃತ್ವದಲ್ಲಿ ನಮ್ಮ ಜನ ಬೆಳಗಾವಿಗೆ ಹೋಗಲು ಸಿದ್ಧರಿದ್ದಾರೆ ಎಂದು ರಾವುತ್ ಹೇಳಿದ್ದಾರೆ.

‘ಮಹಾರಾಷ್ಟ್ರ ಎಲ್ಲವನ್ನೂ ತಾಳ್ಮೆಯಿಂದ ವೀಕ್ಷಿಸುತ್ತಿದೆ. ಆದರೆ, ಅದಕ್ಕೂ ಒಂದು ಮಿತಿ ಇದೆ. 24 ಗಂಟೆಗಳ ಅವಧಿಯಲ್ಲಿ ವಾಹನಗಳ ಮೇಲಿನ ದಾಳಿ ನಿಲ್ಲದಿದ್ದರೆ ನಮ್ಮ ತಾಳ್ಮೆ ಬೇರೆ ಸ್ವರೂಪ ಪಡೆದುಕೊಳ್ಳಲಿದೆ’ ಎಂದು ರಾವುತ್ ಹೇಳಿದ್ದಾರೆ. ಅಗತ್ಯಬಿದ್ದರೆ ಬೆಳಗಾವಿಗೆ ಹೋಗುವುದಾಗಿಯೂ ಪವಾರ್ ಹೇಳಿರುವುದಾಗಿಯೂ ರಾವುತ್ ಹೇಳಿದ್ದಾರೆ.

ವಿವಾದ ಬಗೆಹರಿಸುವ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಢಣವೀಸ್, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ ಕೆಲ ಗಂಟೆಗಳ ಬಳಿಕ ರಾವುತ್ ಈ ಹೇಳಿಕೆ ನೀಡಿದ್ದಾರೆ.

‘ಬೆಳಗಾವಿಯಲ್ಲಿ ಏನಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರವಿದೆ’ಎಂದು ರಾವುತ್ ಹೇಳಿದ್ದಾರೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ