Breaking News

ಮತ್ತೆ ಗೂಡಿಗೆ ಮರಳಿದ ಹಳ್ಳಿ ಹಕ್ಕಿ

Spread the love

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ದವಾಗುತ್ತಿರುವ ಬೆನ್ನಲ್ಲೇ ಈಗ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ.

ಇದಕ್ಕೆ ಪೂರಕವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.

 

 

ಸದಾಶಿವನಗರದಲ್ಲಿಡಿ.ಕೆ.ಶಿವಕುಮಾರ್ಅವರನ್ನು ಅವರು ಭೇಟಿ ಮಾಡಿದರು.ಇತ್ತೀಚಿಗಷ್ಟೇ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಸೇರ್ಪಡೆ ವಿಚಾರವನ್ನು ಪ್ರಸ್ತಾಪಿಸಿದ್ದರು.ಈ ಸಂದರ್ಭದಲ್ಲಿ ಅವರು ರಾಜ್ಯ ನಾಯಕರನ್ನು ಭೇಟಿ ಮಾಡಿ ಬನ್ನಿ ಎನ್ನುವ ಸಲಹೆ ನೀಡಿದ್ದರು ಎನ್ನಲಾಗಿದೆ.

 

ಇದಾದ ಬೆನ್ನಲ್ಲೇ ಅವರು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದರು.ಇಂದು ಅವರು ಅವರು ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿದ್ದಾರೆ.ಈ ಭೇಟಿ ಬೆನ್ನಲ್ಲೇ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ