Breaking News
Home / ಜಿಲ್ಲೆ / ಬಳ್ಳಾರಿ / ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

Spread the love

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ ಬೆಳಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೈಗೊಳ್ಳಲಾಗಿದ್ದ ಪ್ರವಾಸ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ.

10ನೇ ತರಗತಿಯಲ್ಲಿ ಓದುತ್ತಿದ್ದ ನಾಗಲಕ್ಷ್ಮಿ(16) ಮೃತ ವಿದ್ಯಾರ್ಥಿನಿ. ಶ್ರವಣಬೆಳಗೊಳದಲ್ಲಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿದ್ದರಿಂದ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಬಿ.ಇ.ಒ ಗುರಪ್ಪ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೆ.ಬೆಳಗಲ್ ಗ್ರಾಮಕ್ಕೆ ತೆರಳಿ ಘಟನೆ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದಿದ್ದಾರೆ. ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.


Spread the love

About Laxminews 24x7

Check Also

ಜನಾರ್ದನ ರೆಡ್ಡಿ ವಿರುದ್ಧ ಸ್ಪರ್ಧೆಗೆ ಸಿದ್ಧ: ಸೋಮಶೇಖರ್ ರೆಡ್ಡಿ

Spread the love ಬಳ್ಳಾರಿ: ಹೊಸ ಪಕ್ಷವನ್ನು ಸ್ಥಾಪಿಸಿರುವ ಜನಾರ್ದನ ರೆಡ್ಡಿ ವಿರುದ್ಧವೇ ಅವರ ಸಹೋದರ ಸೋಮಶೇಖರ ರೆಡ್ಡಿ ಅವರು ಅಸಮಾಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ